Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:43 - ಕನ್ನಡ ಸತ್ಯವೇದವು J.V. (BSI)

43 ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಬೈಟಕ್ ಸರಲ್ಲ್ಯಾ ಮಾನಾ ಲೈ ಜುದೆವಾಂಚಿ ಲೊಕಾ ಅನಿ ಜುದೆವ್ ನ್ಹಯ್ ಹೊತ್ತಿ ಲೊಕಾಬಿ ಥೈತ್ನಾ ಪಾವ್ಲು ಅನಿ ಬಾರ್ನಾಬಾಂಚ್ಯಾ ವಾಂಗ್ಡಾ ಗೆಲಿ, ತನ್ನಾ ತೆಂಕಾ ದೆವಾಚ್ಯಾ ಕುರ್ಪೆತ್ ಫಿಡೆ ಜಾವ್ಕ್ ಉಮ್ಮೆದ್ ಭರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:43
39 ತಿಳಿವುಗಳ ಹೋಲಿಕೆ  

ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು.


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಹೀಗಿರಲಾಗಿ ಪ್ರಿಯರೂ ಇಷ್ಟರೂ ಆದ ನನ್ನ ಸಹೋದರರೇ, ನನಗೆ ಸಂತೋಷವೂ ಜಯಮಾಲೆಯೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ; ಪ್ರಿಯರೇ.


ಆದರೆ ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.


ನಂಬಿಕೆಯ ಮೂಲಕ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ವರವೇ.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದು - ನೀವು ಹೊಂದಿದ ದೇವರ ಕೃಪೆಯನ್ನು ವ್ಯರ್ಥ ಮಾಡಿಕೊಳ್ಳಬೇಡಿರೆಂದು ಎಚ್ಚರಿಸುತ್ತೇವೆ.


ಕರ್ತನ ಭಯವು ನಮಗಿರುವದರಿಂದ ನಾವು ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಯಥಾರ್ಥರೆಂಬದು ದೇವರಿಗೆ ಗೊತ್ತುಂಟು; ನಿಮ್ಮ ಮನಸ್ಸಿಗೆ ಕೂಡ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.


ಕೃಪೆಯಿಂದ ಆದುಕೊಂಡನು ಅಂದ ಮೇಲೆ ಪುಣ್ಯಕ್ರಿಯೆಗಳ ಕಾರಣದಿಂದ ಆದುಕೊಳ್ಳಲಿಲ್ಲವಷ್ಟೆ; ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವದಕ್ಕಾಗುವದಿಲ್ಲ.


ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.


ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.


ಅವರು ನೀತಿವಂತರೆಂದು ನಿರ್ಣಯ ಹೊಂದುವದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಕ್ರಿಸ್ತಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವದು.


ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಇನ್ನು ಕೆಲವರೂ ಇದ್ದರು.


ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರವರ್ಣದ ವಸ್ತ್ರಗಳನ್ನು ಮಾರುವವಳೂ ಥುವತೈರ ಎಂಬ ಊರಿನವಳೂ ದೇವಭಕ್ತಳೂ ಆಗಿದ್ದಳು. ಪೌಲನು ಹೇಳಿದ ಮಾತುಗಳಿಗೆ ಲಕ್ಷ್ಯಕೊಡುವದಕ್ಕೆ ಕರ್ತನು ಆಕೆಯ ಹೃದಯವನ್ನು ತೆರೆದನು.


ಹೀಗಿರಲಾಗಿ ಪೌಲ ಬಾರ್ನಬರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತಾಡುತ್ತಿದ್ದರು.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ನಿಮ್ಮಲ್ಲಿ ಯಾರಾರು ಕರ್ಮಗಳಿಂದ ನೀತಿವಂತರಾಗಬೇಕೆಂದಿರುತ್ತಾರೋ ಅವರು ಕ್ರಿಸ್ತನಿಂದ ಅಗಲಿ ಹೋದರು. ಕೃಪಾಶ್ರಯದೊಳಗಿಂದ ಬಿದ್ದುಹೋದರು.


ಅವರು ಅವನಿಗೆ ಒಂದು ದಿವಸವನ್ನು ಗೊತ್ತುಮಾಡಲು ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗಿನಿಂದ ಸಾಯಂಕಾಲದವರೆಗೂ ದೇವರ ರಾಜ್ಯವನ್ನು ಕುರಿತು ಪ್ರಮಾಣವಾಗಿ ಸಾಕ್ಷಿಹೇಳುತ್ತಾ ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ವಾದಿಸಿದನು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ಈ ಮಾತು ಸರ್ವಮಂಡಲಿಗೆ ಒಳ್ಳೇದೆಂದು ತೋಚಿತು. ಅವರು ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆದ ಸ್ತೆಫನನನ್ನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.


ಪಂಫುಲ್ಯ, ಐಗುಪ್ತ, ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ ರೋಮಾಪುರದಿಂದ ಬಂದು ಇಳಿದಿರುವ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳೂ ಕ್ರೇತ್ಯರೂ


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬನನ್ನು ನಿಮ್ಮ ಮತದಲ್ಲಿ ಸೇರಿಸಿಕೊಳ್ಳುವದಕ್ಕಾಗಿ ಭೂವಿುಯನ್ನೂ ಸಮುದ್ರವನ್ನೂ ಸುತ್ತಿಕೊಂಡು ಬರುತ್ತೀರಿ; ಅವನು ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟಾಗಿ ನರಕ ಪಾತ್ರನಾಗಮಾಡುತ್ತೀರಿ.


ಪ್ರಿಯರಾದ ಮಕ್ಕಳೇ, ಆತನು ಪ್ರತ್ಯಕ್ಷನಾಗುವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರೋಣ.


ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಆ ಸ್ಥಳವನ್ನು ಬಿಟ್ಟು ದೇವರಿಗೆ ಭಯಪಡುವವನಾಗಿದ್ದ ತೀತಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು