Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:6 - ಕನ್ನಡ ಸತ್ಯವೇದವು J.V. (BSI)

6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ ಮಂತ್ರವಾದಿಯೂ ಆಗಿದ್ದ ಬಾರ್‍‍ಯೇಸು ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡುತ್ತಾ ಪಾಫೊಸ್ ಎಂಬ ಊರಿಗೆ ಹೋದರು. ಅಲ್ಲಿ ‘ಬಾರ್‍ಯೇಸು’ ಎಂಬ ಮಂತ್ರವಾದಿಯನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಫೋಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಫೋಸಿನಲ್ಲಿ ಕಂಡರು. ಅವನ ಹೆಸರು “ಬಾರ್ ಯೇಸು.” ಅವನೊಬ್ಬ ಸುಳ್ಳುಪ್ರವಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ತ್ಯಾ ದ್ವಿಪಾತ್ ಫಿರುಂಗೆತ್ ಪಾಫೊಸ್ ಮನ್ತಲ್ಯಾ ಗಾಂವಾಕ್ ಜಾವ್ನ್ ಮೊಡಿ ಮಂತ್ರಾ ಕರ್‍ತಲ್ಯಾ ಜುದೆವಾಂಚೊ ಝುಟೊ ಪ್ರವಾದಿ ಹೊಲ್ಲೊ ಬಾರ್ ಜೆಜು ಮನ್ತಲ್ಯಾಕ್ ಬಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:6
24 ತಿಳಿವುಗಳ ಹೋಲಿಕೆ  

ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಆದರೆ ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವದಕ್ಕೆ ವೇಷ ಹಾಕಿಕೊಳ್ಳುವವರೂ ಆಗಿದ್ದಾರೆ.


ಆಮೇಲೆ ಅವರು ಯೆರಿಕೋವಿಗೆ ಬಂದರು. ಆತನೂ ಆತನ ಶಿಷ್ಯರೂ ಬಹು ಜನರ ಗುಂಪೂ ಆ ಊರಿನಿಂದ ಹೊರಟು ಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಮಗ್ಗುಲಲ್ಲಿ ಕೂತಿದ್ದನು.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು.


ಮಾಟಗಾರ್ತಿಯನ್ನು ಬದುಕಲೀಸಬಾರದು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಯನ್ನ ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಆ ಮನುಷ್ಯರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಬುದ್ಧಿಗೆಟ್ಟವರೂ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರೂ ಆಗಿದ್ದಾರೆ.


ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.


ಹೇಗೆ ಪ್ರೇರಿಸುವಿ ಎಂದು ಯೆಹೋವನು ಕೇಳಲು ಅದು - ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.


ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯು ಕ್ರಿಸ್ತನನ್ನು ನಂಬದ ಹಾಗೆ ಪ್ರಯತ್ನಿಸಿದನು. ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದೇ ಅರ್ಥ.


ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣ ಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇವಿುಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು