ಅಪೊಸ್ತಲರ ಕೃತ್ಯಗಳು 14:19 - ಕನ್ನಡ ಸತ್ಯವೇದವು J.V. (BSI)19 ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತೆಚ್ಯಾ ಮಾನಾ ಜುದೆವಾಂಚಿ ಲೊಕಾ ಅಂತಿಯೊಕ್ಯ್ ಅನಿ ಇಕೊನಿಯಾ ಮನ್ತಲ್ಯಾ ಶಾರಾಂಚ್ಯಾಕ್ನಾ ಪಾವ್ಲುಕ್ ವಿರೊದ್ ಹೊವ್ನ್ ಯೆವ್ನ್ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್ ಪಾವ್ಲುಕ್ ಗುಂಡೆ ಮಾರುನ್ ತೊ ಮರ್ಲೊ ಮನುನ್ ಚಿಂತುನ್ ಶಾರಾತ್ನಾ ತೆಕಾ ವಡುನ್ ನೆವ್ನ್ ಭಾಯ್ರ್ ಟಾಕ್ಲ್ಯಾನಿ. ಅಧ್ಯಾಯವನ್ನು ನೋಡಿ |