Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:1 - ಕನ್ನಡ ಸತ್ಯವೇದವು J.V. (BSI)

1 ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು; “ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಹೇಳಿರುವ ನಿಯಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು” ಎಂಬುದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಉಲ್ಲಿ ಲೊಕಾ ಜುದೆಯಾ ಮನ್ತಲ್ಯಾ ಶಾರಾಕ್ನಾ ಅಂತಿಯೊಕ್ ಮನ್ತಲ್ಯಾ ಶಾರಾಕ್ ಯೆಲ್ಲಿ, ತುಮಿ ಸುನ್ನತ್ ಕರುನ್ ಘೆಯ್ನಸ್ಲ್ಯಾರ್ ತುಮ್ಕಾ ಸುಟ್ಕಾ ಹೊಯ್ನಾ ಮೊಯ್ಜೆಚ್ಯಾ ಖಾಯ್ದ್ಯಾತ್ ಸಾರ್ಕೆ ಸುನ್ನತ್ ಕರುನ್ ಘೆವ್ಚೆ ಮನುನ್ ಸಾಂಗಲ್ಲೆ ಹಾಯ್ ಮನುನ್ ತೆನಿ ಜುದೆವ್ ನ್ಹಯ್ ಅಸಲ್ಲ್ಯಾ ದೆವಾಚ್ಯಾ ಲೊಕಾಕ್ನಿ ಶಿಕಾಪ್ ಕರುಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:1
25 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು - ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಕ್ಕೆ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿದರು.


ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ.


ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.


ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು


ಮೋಶೆಯು ನಿಮಗೆ ಸುನ್ನತಿಯೆಂಬ ಸಂಸ್ಕಾರವನ್ನು ನೇವಿುಸಿದನು. ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು. ಮತ್ತು ಆ ಸುನ್ನತಿಯನ್ನು ಸಬ್ಬತ್‍ದಿನದಲ್ಲಿಯೂ ಮಾಡುತ್ತೀರಿ.


ಹದಿನಾಲ್ಕು ವರುಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ತಿರಿಗಿ ಯೆರೂಸಲೇವಿುಗೆ ಹೋದೆನು.


ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಆ ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆ ನಮಗೆ ನೇವಿುಸಿರುವ ಆಚಾರಗಳನ್ನು ಬೇರೆ ಮಾಡುವನೆಂಬದಾಗಿ ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.


ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು.


ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.


ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;


ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.


ಬಹಿರಾಚಾರಗಳಿಂದ ಮಾನಪಡೆಯಬೇಕೆಂದಿರುವವರು ಸುನ್ನತಿಮಾಡಿಸಿಕೊಳ್ಳಿರಿ ಎಂಬದಾಗಿ ನಿಮ್ಮನ್ನು ಬಲಾತ್ಕರಿಸುತ್ತಾರೆ. ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದೊಂದೇ ಅವರ ಉದ್ದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು