Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:14 - ಕನ್ನಡ ಸತ್ಯವೇದವು J.V. (BSI)

14 ಸಹೋದರರೇ, ನಾನು ಹೇಳುವದನ್ನು ಕೇಳಿರಿ - ದೇವರು ಮೊದಲಲ್ಲಿ ಅನ್ಯಜನರನ್ನು ಕಟಾಕ್ಷಿಸಿನೋಡಿ ತನ್ನ ಹೆಸರಿಗಾಗಿ ಅವರೊಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ದೆವಾನ್ ಜುದೆವಾಂಚೆ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಕಾಳ್ಜಿ ಕಸಿ ಕರ್ಲಾ ಮನ್ತಲೆ ಸಿಮಾವಾನ್ ಅಮ್ಕಾ ಕಳ್ವುಲ್ಯಾನ್ ದೆವಾನ್ ಜುದೆವಾಂಚಿ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಲೊಕಾ ಕರುನ್ ಘೆಟಲ್ಲೆ ಹೆಚ್ ಪೈಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:14
11 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ನಾನು ಅರಣ್ಯದಲ್ಲಿ ನೀರನ್ನು ಒದಗಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವವನಾದ ಕಾರಣ ನರಿ ಉಷ್ಟ್ರಪಕ್ಷಿ ಮೊದಲಾದ ಕಾಡು ಮೃಗಗಳು ನನ್ನನ್ನು ಘನಪಡಿಸುವವು.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ಸಮಸ್ತವು ಆತನಿಂದ ಉತ್ಪತ್ತಿಯಾಗಿ ಆತನಿಂದ ನಡೆಯುತ್ತಾ ಆತನಿಗಾಗಿ ಇರುತ್ತದೆ; ಆತನಿಗೇ ಸದಾಕಾಲವೂ ಸ್ತೋತ್ರ. ಆಮೆನ್.


ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ಆತನು ಪೂರ್ವದಲ್ಲಿದ್ದ ತನ್ನ ಶ್ರೀಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ ತನ್ನ ಪ್ರಜೆಯನ್ನು ಪರಾಮರಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣವೀರನನ್ನು ಎಬ್ಬಿಸಿದ್ದಾನೆ.


ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು