Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:19 - ಕನ್ನಡ ಸತ್ಯವೇದವು J.V. (BSI)

19 ಹೀಗಿರಲಾಗಿ ನನ್ನ ಅಭಿಪ್ರಾಯ ಏನಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಆದುದರಿಂದ ನನ್ನ ತೀರ್ಮಾನವೇನೆಂದರೆ : ದೇವರ ಕಡೆಗೆ ತಿರುಗುತ್ತಿರುವ ಅನ್ಯಧರ್ಮೀಯರನ್ನು ತೊಂದರೆಗೆ ಈಡುಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಆದ್ದರಿಂದ, ದೇವರ ಕಡೆಗೆ ತಿರುಗುತ್ತಿರುವ ಯೆಹೂದ್ಯರಲ್ಲದವರಿಗೆ ನಾವು ತೊಂದರೆ ಮಾಡಬಾರದು ಎಂಬುದೇ ನನ್ನ ತೀರ್ಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತಸೆ ಹೊವ್ನ್ ಜುದೆವ್ ನ್ಹಯ್ ಹೊಲ್ಲ್ಯಾ ದೆವಾಕ್ಡೆ ಪರ್ತುನ್ ಯೆಲ್ಲ್ಯಾ ಲೊಕಾಕ್ನಿ ಅಮಿ ತರಾಸ್ ದಿತಲೆ ನಕ್ಕೊ, ಹಿ ಮಾಜೆ ಸಲಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:19
12 ತಿಳಿವುಗಳ ಹೋಲಿಕೆ  

ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ವಿಸರ್ಜಿಸುವದು ಅವಶ್ಯವಾಗಿದೆ. ಇದಕ್ಕೆ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ವಿಹಿತವಾಗಿ ತೋರಿತು. ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೇದಾಗುವದು. ಶುಭವಾಗಲಿ.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


[ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.


ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೊರಲಾರದ ನೊಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?


ನೀನು ಅನ್ಯಜನರಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ - ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ ಮೋಶೆಯ ಧರ್ಮವನ್ನು ತ್ಯಾಗಮಾಡಬೇಕೆಂಬದಾಗಿ ಬೋಧಿಸುತ್ತೀ ಎಂದು ನಿನ್ನ ವಿಷಯದಲ್ಲಿ ಬಹಳವಾಗಿ ಕೇಳಿದ್ದಾರೆ.


ಅನ್ಯಜನರಲ್ಲಿ ಯೇಸುವನ್ನು ನಂಬಿರುವವರ ವಿಷಯವಾದರೋ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ಬಿಟ್ಟು ದೂರವಾಗಿರಬೇಕೆಂಬದಾಗಿ ನಾವು ತೀರ್ಮಾನಿಸಿ ಬರೆದೆವು ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು