Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:22 - ಕನ್ನಡ ಸತ್ಯವೇದವು J.V. (BSI)

22 ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅಪೊಸ್ತಲಾನಿ, ಜಾಂನ್ತ್ಯಾ ಲೊಕಾನಿ ಅನಿ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲು ಅನಿ ಬಾರ್ನಾಬಾಸಾಚ್ಯಾ ವಾಂಗ್ಡಾ ಥೊಡ್ಯಾ ಲೊಕಾಕ್ನಿ ಅಂತಿಯೊಕಾಕ್ ಧಾಡುಚೆ ಮನುನ್ ಚಿಂತ್ಲ್ಯಾನಿ, ಅಪ್ಲ್ಯಾ ಉಲ್ಲ್ಯಾ ಲೊಕಾಕ್ನಿ ಎಚುನ್ ಘೆವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನಿ, ತೆನಿ ಬಾರ್ಸಬ್ ಮನ್ತಲ್ಯಾ ಜುದಾಕ್ ಅನಿ ಸಿಲಾಸ್ ಮನ್ತಲ್ಯಾಕ್ ಎಚುನ್ ಘೆಟ್ಲ್ಯಾನಿ, ಹೆನಿ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಪ್ರಮುಖ್ ಹೊವ್ನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:22
29 ತಿಳಿವುಗಳ ಹೋಲಿಕೆ  

ಆದದರಿಂದ ಯೂದನನ್ನೂ ಸೀಲನನ್ನೂ ಕಳುಹಿಸಿದ್ದೇವೆ. ಅವರು ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.


ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಹೊರಟು


ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ -


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.


ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ಸಬನೆಂಬ ಯೋಸೇಫನನ್ನೂ


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.


ಕೂಡಲೇ ಸಹೋದರರು ರಾತ್ರಿಯಲ್ಲಿ ಪೌಲ ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು.


ಅವನು - ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.


ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಚಾವಡಿಗೆ ಅಧಿಕಾರಿಗಳ ಬಳಿಗೆ ಎಳಕೊಂಡು ಹೋದರು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿವಿುತ್ತ ಜೀವದ ಹಂಗನ್ನು ತೊರೆದವರಾದ ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿಕೊಡುವದು ಯುಕ್ತವೆಂದು ನಾವೆಲ್ಲರೂ ಏಕಮನಸ್ಸಾಗಿ ತೀರ್ಮಾನಿಸಿದೆವು.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;


ಇವರ ವಿಷಯವಾದ ವರ್ತಮಾನವು ಯೆರೂಸಲೇವಿುನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.


ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇವಿುನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದರಿಂದ ಅವರು -


ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಕೆಯಾಯಿತು.


ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೋದವರು ಯೆಹೂದ್ಯರಿಗೇ ಹೊರತು ಮತ್ತಾರಿಗೂ ವಾಕ್ಯವನ್ನು ಹೇಳದೆ ಫೊಯಿನಿಕೆ ಕುಪ್ರ ಅಂತಿಯೋಕ್ಯ ಪ್ರಾಂತ್ಯಗಳವರೆಗೂ ಸಂಚರಿಸಿದರು.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ ಕುರೇನ್ಯದವರು ಕೆಲವರೂ ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡಲೂ ಮಾತಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದರು.


ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇವಿುನಿಂದ ಅಂತಿಯೋಕ್ಯಕ್ಕೆ ಬಂದರು.


ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಮಂಡಲಿಯನ್ನು ಕೂಡಿಸಿ ಆ ಕಾಗದವನ್ನು ಅವರಿಗೆ ಒಪ್ಪಿಸಿದರು.


ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಪ್ರಸಿದ್ಧಿಪಡಿಸಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ಪ್ರಕಾರವಾಗಿರಲಿಲ್ಲ; ಆತನಲ್ಲಿ ಹೌದೆಂಬದೇ ನೆಲೆಗೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು