Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:24 - ಕನ್ನಡ ಸತ್ಯವೇದವು J.V. (BSI)

24 ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಮ್ಚ್ಯಾ ತಾಂಡ್ಯಾತ್ನಾ ತುಮ್ಚ್ಯಾ ಜಗ್ಗೊಳ್ ಯೆಲ್ಲ್ಯಾ ಉಲ್ಲ್ಯಾ ಭಾವಾನಿ ಉಲ್ಲಿ ಸಂಗ್ತಿಯಾ ಸಾಂಗುನ್ ತುಮ್ಕಾ ತರಾಸ್ ಹೊಯ್ ಸಾರ್ಕೆ ಕರುನ್ ತುಮ್ಚ್ಯಾತ್ ಗೊಂದಳ್ ಕರ್‍ಲ್ಯಾನಿ ಮನ್ತಲಿ ಖಬರ್ ಅಮ್ಕಾ ಗಾವ್ಲಾ, ಖರೆ ತಸೆ ಕರಾ ಮನುನ್ ಅಮಿ ತೆಂಕಾ ಸಾಂಗುಕ್ ನತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:24
12 ತಿಳಿವುಗಳ ಹೋಲಿಕೆ  

ನಿಮ್ಮನ್ನು ಕಳವಳಪಡಿಸುವವರು ಅಂಗಚ್ಫೇದನೆಯನ್ನಾದರೂ ಮಾಡಿಕೊಂಡರೆ ವಾಸಿ.


ನನಗಂತೂ ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ಭರವಸ ಉಂಟು. ನಿಮ್ಮಲ್ಲಿ ಭೇದವನ್ನು ಹುಟ್ಟಿಸುವವನು ಯಾವನಾದರೂ ಸರಿಯೇ ಬರುವ ದಂಡನೆಯನ್ನು ಅನುಭವಿಸುವನು.


ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಅಪೇಕ್ಷಿಸುತ್ತಾ ಇದ್ದಾರೆ.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂ ಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.


ನಿಮ್ಮಲ್ಲಿ ಯಾರಾರು ಕರ್ಮಗಳಿಂದ ನೀತಿವಂತರಾಗಬೇಕೆಂದಿರುತ್ತಾರೋ ಅವರು ಕ್ರಿಸ್ತನಿಂದ ಅಗಲಿ ಹೋದರು. ಕೃಪಾಶ್ರಯದೊಳಗಿಂದ ಬಿದ್ದುಹೋದರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮ್ಮಲ್ಲಿ ವ್ಯರ್ಥನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಹೃದಯಕ್ಕೆ ಹೊಳೆದದ್ದನ್ನೇ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು