Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:5 - ಕನ್ನಡ ಸತ್ಯವೇದವು J.V. (BSI)

5 ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು - ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಕ್ಕೆ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಫರಿಸಾಯರ ಪಂಗಡಕ್ಕೆ ಸೇರಿದ ಕೆಲವು ವಿಶ್ವಾಸಿಗಳು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದವರು ಸುನ್ನತಿ ಹೊಂದಬೇಕು ಮತ್ತು ಮೋಶೆಯ ನಿಯಮಕ್ಕೆ ವಿಧೇಯರಾಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ದೆವಾಚ್ಯಾ ಲೊಕಾಂತ್ಲಿ ಥೊಡಿ ಲೊಕಾ ಫಾರಿಜೆವಾಂಚ್ಯಾ ತಾಂಡ್ಯಾಚಿ ಲೊಕಾ ಹೊಲ್ಲಿ ಅನಿ ತೆನಿ ಉಟುನ್ ಇಬೆ ರ್‍ಹಾವ್ನ್ “ಜುದೆವಾಂಚಿ ನ್ಹಯ್ ಹೊಲ್ಲ್ಯಾ ಲೊಕಾನಿ ಸುನ್ನತ್ ಕರುನ್ ಘೆವ್ಚೆ ಅನಿ ತೆನಿ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಮಾನುಚೆ ಮನುನ್ ಅಮಿ ತೆಂಕಾ ಸಾಂಗುಚೆ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:5
14 ತಿಳಿವುಗಳ ಹೋಲಿಕೆ  

ಬಳಿಕ ಕೆಲವರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು - ನೀವು ಮೋಶೆಯ ಗ್ರಂಥದಲ್ಲಿ ಹೇಳಿರುವ ನೇಮದ ಪ್ರಕಾರ ಸುನ್ನತಿಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶಮಾಡುತ್ತಿದ್ದರು.


ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.


ಅದಾಗಿ ನಮ್ಮೊಳಗಿಂದ ಹೋದ ಕೆಲವರು ನಮ್ಮಿಂದ ಏನೂ ಅಪ್ಪಣೆಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬದನ್ನು ಕೇಳಿದ್ದರಿಂದ ನಾವು ಕೆಲವರನ್ನು ಆರಿಸಿಕೊಂಡು


ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ಹೀಗಿರುವಲ್ಲಿ ಮಹಾಯಾಜಕನೂ ಸದ್ದುಕಾಯರ ಮತಕ್ಕೆ ಸೇರಿದವರಾದ ಅವನ ಜೊತೆಯಲ್ಲಿದ್ದವರೆಲ್ಲರೂ ಎದ್ದು


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ಆದರೆ ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವದು ನಮಗೆ ಯುಕ್ತವೆಂದು ತೋರುತ್ತದೆ. ಆ ಮತದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತಾಡುತ್ತಾರೆಂಬದೊಂದೇ ನಮಗೆ ಗೊತ್ತದೆ ಅಂದರು.


ದೇವರು ಕರೆದ ಕಾಲದಲ್ಲಿ ಯಾವನಾದರೂ ಸುನ್ನತಿಯುಳ್ಳವನಾಗಿದ್ದನೋ ಅವನು ಸುನ್ನತಿಯಿಲ್ಲದವನಂತಾಗಬಾರದು. ದೇವರು ಕರೆದಾಗ ಯಾವನಾದರೂ ಸುನ್ನತಿಯಿಲ್ಲದವನಾಗಿದ್ದನೋ ಅವನು ಸುನ್ನತಿ ಮಾಡಿಸಿಕೊಳ್ಳಬಾರದು.


ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದರಿಂದ ನಾನು ಅವನನ್ನು ಮುಖಾಮುಖಿಯಾಗಿ ಎದುರಿಸಿದೆನು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು