Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:6 - ಕನ್ನಡ ಸತ್ಯವೇದವು J.V. (BSI)

6 ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ ಬಹು ವಿವಾದವು ನಡೆದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ, ಅಪೊಸ್ತಲರು ಮತ್ತು ಹಿರಿಯರು ಈ ಸಮಸ್ಯೆಯನ್ನು ಪರಿಶೀಲಿಸಲು ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಪೊಸ್ತಲರು ಮತ್ತು ಹಿರಿಯರು ಈ ವಿಷಯದ ಕುರಿತಾಗಿ ವಿಚಾರಿಸಲು ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಾನಾ, ಅಪೊಸ್ತಲಾ ಅನಿ ಜಾಂನ್ತಿ ಲೊಕಾ ಹ್ಯಾ ಸಮಸ್ಯಾಚ್ಯಾ ವಿಶಯಾತ್ ಚರ್ಚಾ ಕರುಕ್ ಮನುನ್ ಗೊಳಾ ಹೊವ್ನ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:6
12 ತಿಳಿವುಗಳ ಹೋಲಿಕೆ  

ಯೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹುಮಂದಿ ಆಲೋಚನಾಪರರಿರುವಲ್ಲಿ ಈಡೇರುವವು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿವಿುತ್ತ ಜೀವದ ಹಂಗನ್ನು ತೊರೆದವರಾದ ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿಕೊಡುವದು ಯುಕ್ತವೆಂದು ನಾವೆಲ್ಲರೂ ಏಕಮನಸ್ಸಾಗಿ ತೀರ್ಮಾನಿಸಿದೆವು.


ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೇಹಿರಿಯರೆಲ್ಲರು ಸಹ ಬಂದರು.


ಅವರು ಯೆರೂಸಲೇವಿುಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ತಿಳಿಸಿದರು.


ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯಮಂಡಲಿಯನ್ನು ಕೂಡಿಸಿ - ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುತ್ತಿರುವದು ತಕ್ಕದ್ದಲ್ಲವಲ್ಲಾ;


ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.


ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.


ಅವರಿಗೂ ಪೌಲ ಬಾರ್ನಬರಿಗೂ ಭೇದವೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಸಹೋದರರು ಪೌಲ ಬಾರ್ನಬರನ್ನೂ ತಮ್ಮಲ್ಲಿ ಬೇರೆ ಕೆಲವರನ್ನೂ ಯೆರೂಸಲೇವಿುನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ನೇವಿುಸಿದರು.


ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು


ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇವಿುನಲ್ಲಿದ್ದ ಅಪೊಸ್ತಲರೂ ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ಒಪ್ಪಿಸಿ ಇವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು