Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:15 - ಕನ್ನಡ ಸತ್ಯವೇದವು J.V. (BSI)

15 ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲಿಡಿಯಾ ಅನಿ ತೆಚ್ಯಾ ಘರಾತ್ ಹೊತ್ತ್ಯಾ ಸಗ್ಳ್ಯಾ ಲೊಕಾನಿಬಿ ಬಾಲ್ತಿಮ್ ಘೆಟ್ಲ್ಯಾನಿ, ಅನಿ ತೆನಿ ಮಿಯಾ ಧನಿಯಾ ಜೆಜುಚ್ಯಾ ವರ್‍ತಿ ಖರೊ ವಿಶ್ವಾಸ್ ಥವಲ್ಲಿ ಮನುನ್ ತುಮಿ ಯೆವಜ್ತ್ಯಾಸಿ ಹೊಲ್ಯಾರ್ ಮಾಜ್ಯಾ ಘರಾಕ್ ಯೆವ್ನ್ ರ್‍ಹಾವಾ ಮನುನ್ ಒತ್ತಾಯ್ ಕರ್‍ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:15
32 ತಿಳಿವುಗಳ ಹೋಲಿಕೆ  

ಅವನು ನಿನಗೆ ಕೆಲವು ಮಾತುಗಳನ್ನು ಹೇಳುವನು, ಆ ಮಾತುಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.


ಅತಿಥಿಸತ್ಕಾರಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಅವರನ್ನು ಕರಕೊಂಡುಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನು ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನಮಾಡಿಸಿಕೊಂಡನು.


ಆದರೆ ಅವರು - ನಮ್ಮ ಸಂಗಡ ಇರು, ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತಮಾಡಲು ಆತನು ಅವರ ಕೂಡ ಇರುವದಕ್ಕೆ ಊರೊಳಕ್ಕೆ ಹೋದನು.


ಅನ್ನಲು ಅವನು ಅವರನ್ನು ಬಹಳ ಬಲವಂತಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.


ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. ಸಭೆಗೆ ಕೆಲವು ಮಾತುಗಳನ್ನು ಬರೆದಿದ್ದೆನು;


ಪ್ರಿಯನೇ, ಪರಿಚಯವಿಲ್ಲದವರಾದ ಸಹೋದರರಿಗೂ ನೀನು ಸತ್ಕಾರವನ್ನು ಮಾಡುವದರಲ್ಲಿ ನಂಬುವವನಿಗೆ ಯೋಗ್ಯನಾಗಿ ನಡೆಯುತ್ತೀ.


ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಹಾಗಾದರೆ ನೀನು ನನ್ನನ್ನು ಜೊತೆಗಾರನೆಂದು ಎಣಿಸಿದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.


ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.


ನಾನು ಹೀಗೆ ಬರೆದು ಬುದ್ಧಿಹೀನನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಕೇವಲ ಅಲ್ಪನಾದರೂ ಅತಿ ಶ್ರೇಷ್ಠರಾದ ಅಪೊಸ್ತಲರು ಅನ್ನಿಸಿಕೊಳ್ಳುವ ಆ ಜನರಿಗಿಂತ ಒಂದರಲ್ಲಿಯಾದರೂ ಕಡಿಮೆಯಾಗಲಿಲ್ಲ.


ಕ್ರಿಸ್ತನ ಪ್ರೀತಿಯು ನಮಗೆ ಒತ್ತಾಯಮಾಡುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡೆವು.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಈ ಉಪದೇಶಕ್ಕೆ ಒಪ್ಪದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ, ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.


ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.


ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದು - ನೀನು ಹಾದಿಗಳಿಗೂ ಬೇಲಿಗಳ ಬಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರಕೊಂಡು ಬಾ, ನನ್ನ ಮನೆ ತುಂಬಲಿ.


ಪ್ರವಾದಿಯನ್ನು ಪ್ರವಾದಿಯೆಂದು ಸೇರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸೇರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.


ಒಂದು ಸಾರಿ ಎಲೀಷನು ಶೂನೇವಿುಗೆ ಹೋದನು. ಅಲ್ಲಿನ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಅವನು - ಒಲ್ಲೆನು; ಊಟಮಾಡುವದಿಲ್ಲ ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕೂತುಕೊಂಡನು.


ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.


ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಅವರು - ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು ಎಂದು ಹೇಳಿ ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.


ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು