Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:23 - ಕನ್ನಡ ಸತ್ಯವೇದವು J.V. (BSI)

23 ಅವರಿಗೆ ಬಹಳ ಪೆಟ್ಟುಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ - ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಖಂಡಿತವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ಸೆರೆಮನೆಯ ಅಧಿಕಾರಿಗೆ, “ಅವರನ್ನು ಬಹು ಎಚ್ಚರಿಕೆಯಿಂದ ಕಾಯಿರಿ!” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರನ್ನು ಛಡಿ ಏಟುಗಳಿಂದ ಬಹಳವಾಗಿ ಥಳಿಸಿ ಸೆರೆಮನೆಗೆ ಹಾಕಲಾಯಿತು. ಅವರನ್ನು ಜಾಗರೂಕತೆಯಿಂದ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಆಜ್ಞಾಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಬಂದಿಖಾನ್ಯಾತ್ ಘಾಲ್ವುನ್ ಮಾನಾ ಬಂಧಿಖಾನ್ಯಾಚ್ಯಾ ಅಧಿಕಾರಿಕ್, ತೆಂಕಾ ಲೈ ಉಶಾರ್ಕಿನ್ ರಾಕಾ! ಮನುನ್ ಹುಕುಮ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:23
21 ತಿಳಿವುಗಳ ಹೋಲಿಕೆ  

ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಹಾಗೆ ಆಜ್ಞಾಪಿಸದೆ ಮುದುಕನೂ ಈಗ ಕ್ರಿಸ್ತ ಯೇಸುವಿನ ನಿವಿುತ್ತ ಸೆರೆಯವನೂ ಆಗಿರುವ ಈ ಪೌಲನೆಂಬ ನಾನು ಪ್ರೀತಿಯ ನಿವಿುತ್ತ ನಿನ್ನನ್ನು ಬೇಡಿಕೊಳ್ಳುತ್ತೇನೆ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಸೆರೇಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ - ಅಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.


ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳಬೇಕೆಂದಿದ್ದನು.


ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು.


ಅವನನ್ನು ಪಸ್ಕಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.


ಆ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇವಿುಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರದವರಿಗೆ ನೀನು ಕಾಗದವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.


ಕಾವಲಿನ ಮನೆ ಪೂರ್ಣ ಭದ್ರವಾಗಿ ಮುಚ್ಚಿರುವದನ್ನೂ ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ ಎಂದು ತಿಳಿಸಿದರು.


ಮತಾಭಿಮಾನದಿಂದ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಪಟ್ಟಣದ ಕಾವಲಿನಲ್ಲಿಟ್ಟರು.


ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.


ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ - ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ ಎಂದು ಗುರುತು ಹೇಳಿಕೊಟ್ಟನು.


ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರಿಸುತ್ತೇವೆ.


ಅವರು ಕ್ರಿಸ್ತನ ಸೇವಕರೋ ಅವರಿಗಿಂತ ನಾನು ಹೆಚ್ಚಾಗಿ ಸೇವೆಮಾಡುವವನಾಗಿದ್ದೇನೆ. ಬುದ್ಧಿಸ್ವಾಧೀನವಿಲ್ಲದವನಾಗಿ ಮಾತಾಡುತ್ತೇನೆ. ಆತನ ಸೇವೆಯಲ್ಲಿ ಅವರಿಗಿಂತ ಹೆಚ್ಚಾಗಿ ಪ್ರಯಾಸಪಟ್ಟೆನು, ಹೆಚ್ಚಾಗಿ ಸೆರೆಮನೆಗಳೊಳಗೆ ಬಿದ್ದೆನು; ವಿುತಿಮೀರಿ ಪೆಟ್ಟುಗಳನ್ನು ತಿಂದೆನು, ಅನೇಕಸಾರಿ ಮರಣದ ಬಾಯೊಳಗೆ ಸಿಕ್ಕಿಕೊಂಡೆನು.


ಅವನು ಆ ಯಾಜಕರಿಗೆ ಮೇಲೆ ಬರಬೇಕೆಂದು ವಿಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು