Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:34 - ಕನ್ನಡ ಸತ್ಯವೇದವು J.V. (BSI)

34 ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಯೆವ್ಡೆ ಹೊಲ್ಲ್ಯಾ ತನ್ನಾ, ತೆನಿ ಸಗ್ಳಿ ಲೊಕಾ ಧನಿಯಾಚೆರ್ ವಿಶ್ವಾಸ್ ಥವಲ್ಲ್ಯಾಸಾಟಿ ಲೈ ಕುಶಿ ಹೊಲೆ ಮಾನಾ ತೆನಿ ಪಾವ್ಲುಕ್ ಅನಿ ಸಿಲಾಸಾಕ್ ಅಪ್ಲ್ಯಾ ಘರಾಕ್ ಬಲ್ವುನ್ ನ್ಹೆವ್ನ್ ಜೆವಾನ್ ಕರಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:34
26 ತಿಳಿವುಗಳ ಹೋಲಿಕೆ  

ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹ ಉಂಟಾದದರಿಂದ ನಿನ್ನ ಪ್ರೀತಿಯ ನಿವಿುತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.


ಇಷ್ಟು ಮಾತ್ರವೇ ಅಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಮಾಧಾನಸ್ಥಿತಿ ಹೊಂದಿದವರಾಗಿ ಆತನ ಮುಖಾಂತರ ದೇವರಲ್ಲಿ ಹರ್ಷಗೊಳ್ಳುತ್ತೇವೆ.


ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;


ಪ್ರಿಯರಾದ ಮಕ್ಕಳೇ, ನಾವು ಬರೀಮಾತಿನಿಂದಾಗಲಿ ಬಾಯುಪಚಾರದಿಂದಾಗಲಿ ಪ್ರೀತಿಸುವವರಾಗಿರಬಾರದು; ನಿಮ್ಮ ಪ್ರೀತಿಯು ಕೃತ್ಯದಲ್ಲಿಯೂ ಸತ್ಯದಲ್ಲಿಯೂ ತೋರಬೇಕು.


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವದಿಲ್ಲ; ನಿಮ್ಮ ಆತ್ಮಕ್ಕೆ ಆದಾಯವಾಗುವಂಥ ಪ್ರೀತಿಫಲವನ್ನೇ ಅಪೇಕ್ಷಿಸುತ್ತೇನೆ. ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಯಾಯಿತು.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ.


ನಾವು ಈಗ ನೆಲೆಗೊಂಡಿರುವ ದೇವರ ಕೃಪಾಶ್ರಯದಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾಯಿತು. ಮತ್ತು ದೇವರ ಮಹಿಮೆಯನ್ನು ಹೊಂದುವೆವೆಂಬ ಭರವಸದಿಂದ ಉಲ್ಲಾಸವಾಗಿದ್ದೇವೆ.


ಅವನು ನಿನಗೆ ಕೆಲವು ಮಾತುಗಳನ್ನು ಹೇಳುವನು, ಆ ಮಾತುಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.


ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ.


ಅವನು ತಟ್ಟನೆ ಇಳಿದು ಬಂದು ಆತನನ್ನು ಸಂತೋಷದಿಂದ ಸೇರಿಸಿಕೊಂಡನು.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ತರುವಾಯ ಲೇವಿಯು ತನ್ನ ಮನೆಯಲ್ಲಿ ಆತನಿಗೆ ಒಂದು ದೊಡ್ಡ ಔತಣವನ್ನು ಮಾಡಿಸಲು ಸುಂಕದವರೂ ಇತರರೂ ಗುಂಪಾಗಿ ಕೂಡಿ ಅವರ ಸಂಗಡ ಊಟಕ್ಕೆ ಕೂತುಕೊಂಡಿದ್ದರು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಬೆಳಗಾದ ಮೇಲೆ ಅಧಿಪತಿಗಳು ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಜವಾನರ ಕೈಯಲ್ಲಿ ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು