Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:5 - ಕನ್ನಡ ಸತ್ಯವೇದವು J.V. (BSI)

5 ಸಭೆಗಳು ಕ್ರಿಸ್ತನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗೆ ಕ್ರೈಸ್ತಸಭೆಗಳು ವಿಶ್ವಾಸದಲ್ಲಿ ದೃಢಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದರಿಂದಾಗಿ ಸಭೆಗಳು ನಂಬಿಕೆಯಲ್ಲಿ ಬಲವಾಗತೊಡಗಿದವು ಮತ್ತು ಸಂಖ್ಯೆಯಲ್ಲಿ ದಿನದಿನಕ್ಕೂ ಹೆಚ್ಚಾಗತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹೀಗೆ ಸಭೆಗಳು ವಿಶ್ವಾಸದಲ್ಲಿ ಬಲಗೊಂಡು ಸಂಖ್ಯೆಯಲ್ಲಿ ಅನುದಿನ ಹೆಚ್ಚುತ್ತಾ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆ ಹೊವ್ನ್, ದಿಸಾಂದಿಸ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ನಿ ವಿಶ್ವಾಸ್ ಅನಿ ತೆಂಚೊ ಅಂಕೊ ವಾಡುಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:5
23 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಆದದರಿಂದ ನೀವು ಕರ್ತನಾದ ಯೇಸುವೆಂಬ ಕ್ರಿಸ್ತನನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದುಕೊಳ್ಳಿರಿ.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ


ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಿಮ್ಮ ಹೃದಯಗಳನ್ನು ಸಂತೈಸಿ


ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.


ನಿಮ್ಮ ಮೇಲೆ ಬಂದಿರುವ ಸಂಕಟಗಳಲ್ಲಿ ಒಬ್ಬರೂ ಚಂಚಲರಾಗದಂತೆ ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ಪ್ರಬೋಧಿಸುವದಕ್ಕೂ ನಮ್ಮ ಸಹೋದರನೂ ಕ್ರಿಸ್ತನ ಸುವಾರ್ತೆಯ ಉದ್ಯೋಗದಲ್ಲಿ ದೇವರ ಸೇವಕನೂ ಆಗಿರುವ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ಕರ್ತನ ಹಸ್ತವು ಅವರಿಗೆ ಸಹಾಯವಾದ್ದರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.


ಮತ್ತು ಇನ್ನು ಎಷ್ಟೋ ಮಂದಿ ಗಂಡಸರೂ ಹೆಂಗಸರೂ ಕರ್ತನಲ್ಲಿ ನಂಬಿಕೆಯಿಡುವವರಾಗಿ ಅವರ ಮಂಡಲಿಯಲ್ಲಿ ಸೇರಿಕೊಳ್ಳುತ್ತಿದ್ದರು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.


ಅರುವತ್ತೈದು ವರುಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ನಿಮಗೆ ನಂಬಿಕೆಯು ಸ್ಥಿರವಿಲ್ಲದಿದ್ದರೆ ನಿಮಗೆ ಸ್ಥಿರತೆಯೇ ಇಲ್ಲ ಎಂಬದೇ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು