Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:11 - ಕನ್ನಡ ಸತ್ಯವೇದವು J.V. (BSI)

11 ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಯೆಹೂದ್ಯರು ಥೆಸಲೋನಿಕದ ಯೆಹೂದ್ಯರಿಗಿಂತಲೂ ಉತ್ತಮರಾಗಿದ್ದರು. ಪೌಲ ಸೀಲರು ಹೇಳಿದ ಸಂಗತಿಗಳನ್ನು ಇವರು ಬಹಳ ಸಂತೋಷದಿಂದ ಕೇಳಿದರು. ಮತ್ತು ಈ ಸಂಗತಿಗಳು ನಿಜವೇ ಎಂಬುದನ್ನು ತಿಳಿದುಕೊಳ್ಳಲು ಪವಿತ್ರ ಗ್ರಂಥವನ್ನು ಪ್ರತಿದಿನವೂ ಅಧ್ಯಯನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹಿ ಜುದೆವಾಂಚಿ ಲೊಕಾ ಥೆಸಲೊನಿಕಾತ್ಲ್ಯಾ ಜುದೆವಾಂಚ್ಯಾಕ್ಕಿಂತಾಬಿ ಬರಿ ಹೊವ್ನ್ ಹೊತ್ತಿ, ತೆನಿ ಪಾವ್ಲುನ್ ಅನಿ ಸಿಲಾಸಾನ್ ಸಾಂಗ್ತಲಿ ಸಂಗ್ತಿಯಾ ಉಮ್ಮೆದಿನ್ ಆಯಿಕ್ಲ್ಯಾನಿ, ಅನಿ ಹಿ ಸಂಗ್ತಿಯಾ ಖರೆಚ್ ಕಾಯ್ ಮನುನ್ ಕಳ್ವುನ್ ಘೆವ್ಕ್ ಸಾಟ್ನಿ ಸದ್ದಿಚ್ ಪವಿತ್ರ್ ಪುಸ್ತಕ್ ವಾಚ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:11
34 ತಿಳಿವುಗಳ ಹೋಲಿಕೆ  

ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಯಾವದೂ ಇಲ್ಲದಿರದು, ಎಲ್ಲವೂ ಜೊತೆಜೊತೆಯಾಗಿರುವವು; ಆತನ ಬಾಯಿಂದ ಅಪ್ಪಣೆಯಾಯಿತಲ್ಲವೆ, ಆತನ ಆತ್ಮವು ಇವುಗಳನ್ನು ಒಟ್ಟಿಗೆ ಬರಮಾಡಿತಷ್ಟೆ.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ಒಬ್ಬನು ವಾಕ್ಯವನ್ನು ಕೇಳಿ ತಿಳುಕೊಂಡು ಫಲವಂತನಾಗಿ ನೂರರಷ್ಟಾಗಲಿ ಅರುವತ್ತರಷ್ಟಾಗಲಿ ಮೂವತ್ತರಷ್ಟಾಗಲಿ ಫಲವನ್ನು ಕೊಡುತ್ತಾನೆ; ಇವನೇ ಒಳ್ಳೆಯ ನೆಲವಾಗಿರುವವನು ಎಂದು ಹೇಳಿದನು.


ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳುವಳಿಕೆಯನ್ನು ಪಡೆಯುವನು.


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಂಡಿತ್ಯವನ್ನು ಹೊಂದುವನು, ವಿವೇಕಿಯು [ಮತ್ತಷ್ಟು] ಉಚಿತಾಲೋಚನೆಯುಳ್ಳವನಾಗುವನು.


ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನಾದ ಯೇಸುವನ್ನೂ ಅನುಸರಿಸುವವರಾದಿರಿ.


ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ತನ್ನ ಕೃತ್ಯಗಳನ್ನು ಮಾಡಿದ್ದೇನೆಂದು ತೋರಿಬರುವಂತೆ ಬೆಳಕಿಗೆ ಬರುತ್ತಾನೆ.


ಅವರು ಸತ್ಯದ ಮೇಲೆ ಪ್ರೀತಿಯನ್ನಿಡದ ಕಾರಣದಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ಎಲ್ಲಾ ತರದ ನಿಂದೆಯನ್ನೂ ವಿಸರ್ಜಿಸಿ ಹಸುಮಕ್ಕಳಂತೆ ಪಾರಮಾರ್ಥಿಕವಾದ ಶುದ್ಧ ಹಾಲನ್ನು ಬಯಸಿರಿ; ಅದರಿಂದ ಬೆಳೆಯುತ್ತಾ ರಕ್ಷಣೆಯನ್ನು ಹೊಂದುವಿರಿ; ಕರ್ತನು ದಯಾಳುವೆಂದು ನೀವು ಅನುಭವದಿಂದ ತಿಳಿದುಕೊಂಡಿದ್ದೀರಲ್ಲವೋ?


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ನನ್ನ ಬೋಧನೆಯನ್ನು ಬೆಳ್ಳಿಗಿಂತಲೂ ಜ್ಞಾನೋಪದೇಶವನ್ನು ಅಪರಂಜಿಗಿಂತಲೂ ಉತ್ತಮವೆಂದು ಹೊಂದಿಕೊಳ್ಳಿರಿ.


ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಇರುಳಿನ ಒಂದೊಂದು ಜಾವವನ್ನು ಮುಂಗೊಂಡು ನಿನ್ನ ನುಡಿಯನ್ನು ಧ್ಯಾನಿಸುತ್ತೇನೆ.


ನಿನ್ನ ನೇಮಗಳನ್ನು ಕೈಕೊಂಡಿರುವದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.


ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ; ದಿನವೆಲ್ಲಾ ಅದೇ ನನ್ನ ಧ್ಯಾನ.


ನಾನು ತಡಮಾಡದೆ ನಿನ್ನ ಹತ್ತರ ಕಳುಹಿಸಿದೆನು. ನೀನು ಬಂದದ್ದು ಉಪಕಾರವಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಮುಂದೆ ಅವರು ಮಾರ್ಗಹಿಡಿದು ಅಂಫಿಪೊಲಿ ಅಪೊಲೋನ್ಯ ಎಂಬ ಊರುಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರದೊಂದು ಸಭಾಮಂದಿರವಿತ್ತು.


ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.


ಆದರೆ ಅಬ್ರಹಾಮನು - ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ; ಅವುಗಳನ್ನು ಕೇಳಲಿ ಅನ್ನಲು


ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?


ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು