Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:18 - ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ಎಪಿಕೂರಿಯರು ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು - ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ? ಅಂದರು. ಅವನು ಯೇಸುವಿನ ವಿಷಯವಾಗಿಯೂ ಸತ್ತವರು ಎದ್ದುಬರುವರೆಂಬುವ ವಿಷಯವಾಗಿಯೂ ಸಾರುತ್ತಿದ್ದದರಿಂದ - ಇವನು ಅನ್ಯದೇಶದ ದೈವಗಳನ್ನು ಪ್ರಸಿದ್ಧಿಪಡಿಸುವವನಾಗಿ ತೋರುತ್ತಾನೆಂದು ಬೇರೆ ಕೆಲವರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಪಿಕೊರಿಯಾ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರಲ್ಲಿ ಕೆಲವರು ಅವನೊಂದಿಗೆ ವಾದಿಸಿದರು. ಅವರಲ್ಲಿ ಕೆಲವರು, “ಈ ಮನುಷ್ಯನಿಗೆ ತಾನು ಯಾವುದರ ಬಗ್ಗೆ ಮಾತಾಡುತ್ತಿದ್ದೇನೆ ಎಂಬುದೇ ನಿಜವಾಗಿಯೂ ತಿಳಿದಿಲ್ಲ. ಅವನು ಏನು ಹೇಳಲು ಪ್ರಯತ್ನಿಸುತ್ತಿದ್ದಾನೆ?” ಎಂದರು. ಯೇಸುವು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದಿದ್ದಾನೆ ಎಂಬ ಸುವಾರ್ತೆಯನ್ನು ಪೌಲನು ಅವರಿಗೆ ಹೇಳುತ್ತಿದ್ದನು. ಆದ್ದರಿಂದ ಅವರು, “ಕೆಲವು ಬೇರೆ ದೇವರುಗಳ ಬಗ್ಗೆ ಅವನು ನಮಗೆ ಹೇಳುತ್ತಿರುವಂತೆ ತೋರುತ್ತಿದೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಎಪಿ ಕೊರಿಯಾ ಅನಿ ಸ್ಥೊಯಿಕ್ ತತ್ವ್ ಜ್ಞಾನಿತ್ನಿ ಥೊಡ್ಯಾ ಲೊಕಾನಿ ಪಾವ್ಲು ವಾಂಗ್ಡಾ ವಾದ್ ಕರುನ್, ಹ್ಯೊ ಮಾನುಸ್ ದುಶ್ರ್ಯಾ ದೆಶಾಚ್ಯಾ ದೆವಾಚ್ಯಾ ವಿಶಯಾತ್ ಬೊಲುಲ್ಲಾ ಮಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೊ ಜೆಜುಚ್ಯಾ ಪರ್ತುನ್ ಝಿತ್ತೊ ಹೊತಲ್ಯಾ ವಿಶಯಾತ್ ಬೊಲುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:18
16 ತಿಳಿವುಗಳ ಹೋಲಿಕೆ  

ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನಬೋಧೆಯಿಂದ ನಿಮ್ಮ ಮನಸ್ಸನ್ನು ಕೆಡಿಸಿ ನಿಮ್ಮನ್ನು ವಶಮಾಡಿಕೊಂಡಾರು, ಎಚ್ಚರಿಕೆಯಾಗಿರ್ರಿ.


ಸತ್ತವರು ಜೀವಿತರಾಗಿ ಏಳುವರು ಎಂಬದನ್ನು ಯೇಸುವಿನ ದೃಷ್ಟಾಂತದಿಂದ ಸಾರುತ್ತಾ ಇದ್ದದ್ದಕ್ಕೆ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅಸಮಾಧಾನಪಟ್ಟು ಅಪೊಸ್ತಲರು ಜನರ ಸಂಗಡ ಮಾತಾಡುತ್ತಿರುವಾಗಲೇ ಬಂದು


ಬಳಿಕ ಆತನು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿನವಾಗಿ ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡಿ ಪ್ರಶ್ನೆ ಮಾಡುತ್ತಾ


ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು.


ಯಾವನೂ ತನ್ನನ್ನು ತಾನೇ ಮೋಸಗೊಳಿಸದಿರಲಿ. ತಾನು ನಿಮ್ಮಲ್ಲಿ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವವನು ಜ್ಞಾನಿಯಾಗುವಂತೆ ಹುಚ್ಚನಾಗಲಿ.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.


ತರುವಾಯ ಅವರು [ಉಳಿದ] ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವದನ್ನೂ ಕಂಡರು.


ತಾನೇ ಜ್ಞಾನಿಯೆಂದೆಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ಮೂಢನ ಸಂಗಡ ಮಾತಾಡಬೇಡ; ನಿನ್ನ ಮಾತುಗಳ ವಿವೇಕವನ್ನು ತಿರಸ್ಕರಿಸುವನು.


ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು


ಹಿರೀಸಭೆಯ ಎದುರಿನಿಂದ ಹೊರಟುಹೋಗಿ ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ವಿಷಯವಾದ ಶುಭವರ್ತಮಾನವನ್ನು ಸಾರುತ್ತಾ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು