Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:4 - ಕನ್ನಡ ಸತ್ಯವೇದವು J.V. (BSI)

4 ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಥೈ ಖರ್ಯ್ಯಾ ದೆವಾಕ್ ಪ್ರೆಮ್ ಕರ್‍ತಲಿ ಗ್ರಿಕಾಂಚಿ ಉಲ್ಲಿ ಲೊಕಾ ಉಲ್ಲಿ ಪ್ರಮುಖ್ಯ್ ಬಾಯ್ಕಾಮಾನ್ಸಾ ಹೊತ್ತಿ, ತೆನಿ ಮನ್ ಪರ್ತುನ್ ಪಾವ್ಲು ಅನಿ ಸಿಲಾಸಾಚ್ಯಾ ತಾಂಡ್ಯಾಕ್ ಮಿಳ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:4
31 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಅವರಲ್ಲಿ ಬಹಳ ಮಂದಿ ನಂಬಿದರು; ಅದಲ್ಲದೆ ಕುಲೀನರಾದ ಗ್ರೀಕ್‍ಹೆಂಗಸರಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.


ಆಗ ಆ ಊರಿನ ಜನರಲ್ಲಿ ಭೇದವುಂಟಾಯಿತು; ಕೆಲವರು ಯೆಹೂದ್ಯರ ಪಕ್ಷದವರಾದರು, ಕೆಲವರು ಅಪೊಸ್ತಲರ ಪಕ್ಷದವರಾದರು.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ನಾವು ನೆನಸಿದ್ದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.


ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.


ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು.


ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯಸೀಮೆಯಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಎಲ್ಲರೂ ಕರ್ತನ ವಾಕ್ಯವನ್ನು ಕೇಳಿದರು.


ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.


ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಇನ್ನು ಕೆಲವರೂ ಇದ್ದರು.


ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ವಾದಿಸಿದನು.


ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿವಿುತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.


ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಹೊರಟು


ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.


ಆದದರಿಂದ ಯೂದನನ್ನೂ ಸೀಲನನ್ನೂ ಕಳುಹಿಸಿದ್ದೇವೆ. ಅವರು ಈ ಸಂಗತಿಗಳನ್ನು ಬಾಯಿಮಾತಿನಿಂದಲೂ ನಿಮಗೆ ತಿಳಿಸುವರು.


ಇಕೋನ್ಯದಲ್ಲಿ ಪೌಲ ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಬಲವಾಗಿ ಮಾತಾಡಿದ್ದರಿಂದ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ಬಹುಮಂದಿ ನಂಬುವವರಾದರು.


ಇವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮಹಾಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.


ನಂಬಿದವರೆಲ್ಲರು ಒಗ್ಗಟ್ಟಾಗಿದ್ದು ತಮ್ಮದೆಲ್ಲವನ್ನೂ ಹುದುವಾಗಿ ಅನುಭೋಗಿಸುತ್ತಾ


ಅದಕ್ಕೆ ಯೆಹೂದ್ಯರು - ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿರುತ್ತಾನೆ? ಗ್ರೀಕರೊಳಗೆ ಚದರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಉಪದೇಶ ಮಾಡಬೇಕೆಂದಿರುತ್ತಾನೋ?


ಮಹಿಳಾಮಣಿಯೇ, ನಿನ್ನಿನಿಯನು ಎಲ್ಲಿ ಹೋದನು? ನಾವು ನಿನ್ನೊಂದಿಗೆ ಅವನನ್ನು ಹುಡುಕುವಂತೆ ತಿಳಿಸು. ನಿನ್ನ ನಲ್ಲನು ಎಲ್ಲಿಗೆ ತೆರಳಿರುವನು?


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಕೂಡಲೇ ಸಹೋದರರು ರಾತ್ರಿಯಲ್ಲಿ ಪೌಲ ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು