Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:21 - ಕನ್ನಡ ಸತ್ಯವೇದವು J.V. (BSI)

21 ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೌಲನು ಅವರಿಗೆ, “ದೇವರು ಬಯಸುವುದಾದರೆ, ನಾನು ನಿಮ್ಮ ಬಳಿಗೆ ಮತ್ತೆ ಬರುತ್ತೇನೆ” ಎಂದು ಹೇಳಿ ಅಲ್ಲಿಂದ ಹೊರಟನು. ಹೀಗೆ ಪೌಲನು ಎಫೆಸದಿಂದ ನೌಕಾಯಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆಚ್ಯಾ ಬದ್ಲಾಕ್ ತೆನಿ ಜಾತಾನಾ ತೆಂಕಾ ದೆವಾಚೊ ಮನ್ ರ್‍ಹಾಲ್ಯಾರ್, ಮಿಯಾ ಪರ್ತುನ್ ತುಮ್ಚ್ಯಾಕ್ಡೆ ಯೆತಾ ಮನುನ್ ಸಾಂಗುನ್ ಢೊನಾತ್ನಾ ಸಮುಂದರಾಚ್ಯಾ ವಾಟೆನ್ ಎಫೆಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:21
28 ತಿಳಿವುಗಳ ಹೋಲಿಕೆ  

ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನಲ್ಲ ಅವರ ಶಕ್ತಿಯನ್ನೇ ಗೊತ್ತುಮಾಡಿಕೊಳ್ಳುವೆನು.


ಆದದರಿಂದ ನೀವು ಅಂಥ ಮಾತನ್ನು ಬಿಟ್ಟು ದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ಹೇಳಬೇಕು.


ಮತ್ತು ದೇವರ ಚಿತ್ತವಾದರೆ ಹೀಗೆ ಸಾಗುತ್ತಾ ಹೋಗುವೆವು.


ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿ ಹೊಂದಲಾಗುವದು.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇವಿುನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.


ಕಡೇ ಮಾತೇನಂದರೆ ಸಹೋದರರೇ ಸಂತೋಷಪಡಿರಿ, ಕ್ರಮಪಡಿಸಿಕೊಳ್ಳಿರಿ; ಧೈರ್ಯವುಳ್ಳವರಾಗಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ; ಆಗ ಪ್ರೀತಿಯನ್ನೂ ಶಾಂತಿಯನ್ನೂ ಕೊಡುವ ದೇವರು ನಿಮ್ಮ ಸಂಗಡ ಇರುವನು.


ಈ ಸಮಯದಲ್ಲಿ ಹೋಗುಹೋಗುತ್ತಾ ನಿಮ್ಮನ್ನು ನೋಡುವದಕ್ಕೆ ನನಗೆ ಇಷ್ಟವಿಲ್ಲ; ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ.


ಅವನು ಒಡಂಬಡದೆ ಇದ್ದದರಿಂದ ಕರ್ತನ ಚಿತ್ತವಿದ್ದಂತೆ ಆಗಲಿ ಎಂದು ಹೇಳಿ ನಾವು ಸುಮ್ಮಗಾದೆವು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ಇನ್ನೊಬ್ಬನು ಸಹ - ಸ್ವಾಮೀ, ನಿನ್ನನ್ನು ಹಿಂಬಾಲಿಸುತ್ತೇನೆ; ಆದರೆ ಮೊದಲು ನನ್ನ ಮನೆಯವರಿಗೆ ಹೇಳಿಬರುವದಕ್ಕೆ ನನಗೆ ಅಪ್ಪಣೆಯಾಗಬೇಕು ಅಂದನು.


ಸ್ವಲ್ಪ ಮುಂದೆ ಹೋಗಿ ಬೋರಲಬಿದ್ದು - ನನ್ನ ತಂದೆಯೇ, ಸಾಧ್ಯವಾಗಿದ್ದರೆ ಈ ಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಹೇಗೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ದೇವರನ್ನು ಪ್ರಾರ್ಥಿಸಿದನು.


ನೀವು ಚೈತ್ರಮಾಸದಲ್ಲಿ ಪಸ್ಕ ಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದಲ್ಲಿಯೇ ರಾತ್ರಿಕಾಲದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಲ್ಲವೇ.


ಆತನು ಜನರಿಗೆ ಅಪ್ಪಣೆಕೊಟ್ಟನಂತರ ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋದನು.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟನು. ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಅವರು ಅವನನ್ನು ಇನ್ನೂ ಕೆಲವು ಕಾಲ ಇರಬೇಕೆಂದು ಕೇಳಿಕೊಂಡಾಗ ಅವನು ಒಪ್ಪದೆ -


ಅಷ್ಟರೊಳಗೆ ಅಲೆಕ್ಸಾಂದ್ರಿಯದಲ್ಲಿ ಹುಟ್ಟಿದ ಅಪೊಲ್ಲೋಸನೆಂಬ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದನು. ಅವನು ವಾಕ್ಚಾತುರ್ಯವುಳ್ಳವನು, ಶಾಸ್ತ್ರಗಳಲ್ಲಿ ಪ್ರವೀಣನು.


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು.


ಮುಂಚೆ ಅವರು ಎಫೆಸದ ತ್ರೊಫಿಮನನ್ನು ಅವನ ಸಂಗಡ ಪಟ್ಟಣದಲ್ಲಿ ಕಂಡಿದ್ದರಿಂದ ಅವನನ್ನು ಪೌಲನು ದೇವಾಲಯದೊಳಗೆ ಕರೆದುಕೊಂಡು ಬಂದನೆಂದು ಭಾವಿಸಿದರು.


ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಪಂಚಾಶತ್ತಮ ದಿನದ ಹಬ್ಬದ ತನಕ ಎಫೆಸದಲ್ಲಿರುವೆನು;


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು