Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:17 - ಕನ್ನಡ ಸತ್ಯವೇದವು J.V. (BSI)

17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರೂ ಅನ್ಯಧರ್ಮೀಯರೂ ಈ ವಿಷಯವನ್ನು ಕೇಳಿ ಭಯಭೀತರಾದರು. ಪ್ರಭು ಯೇಸುವಿನ ನಾಮವನ್ನು ಸಂಕೀರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಫೆಸದಲ್ಲಿದ್ದ ಯೆಹೂದ್ಯರು ಮತ್ತು ಗ್ರೀಕರು ಇದನ್ನು ಕೇಳಿ ಭಯಗ್ರಸ್ತರಾದರು ಮತ್ತು ಪ್ರಭು ಯೇಸುವಿನ ಹೆಸರನ್ನು ಸನ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗೂ ಗ್ರೀಕರಿಗೂ ಈ ವಿಷಯ ತಿಳಿದಾಗ, ಅವರೆಲ್ಲರೂ ಬಹಳ ಭಯಗೊಂಡರು. ಹೀಗೆ ಕರ್ತ ಯೇಸುವಿನ ಹೆಸರಿಗೆ ಅತ್ಯಂತ ಮಹಿಮೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಎಫೆಸಾತ್ ರ್‍ಹಾತಲಿ ಜುದೆವಾಂಚಿ ಅನಿ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾನಿ ಜೆಜುಚ್ಯಾ ವಿಶಯಾತ್ ಆಯ್ಕಲ್ಯಾನಿ, ಅನಿ ಭಿಂವ್ಲ್ಯಾನಿ, ಅನಿ ಧನಿಯಾ ಜೆಜುಚ್ಯಾ ನಾವಾಕ್ ಲೈ ಮಾನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:17
22 ತಿಳಿವುಗಳ ಹೋಲಿಕೆ  

ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದ ನಿಮ್ಮ ಮೂಲಕ ನಮ್ಮ ಕರ್ತನಾದ ಯೇಸುವಿನ ಹೆಸರಿಗೆ ಮಹಿಮೆ ಉಂಟಾಗುವದು; ಆತನ ಮೂಲಕ ನಿಮಗೂ ಮಹಿಮೆ ಉಂಟಾಗುವದು.


ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ಮತ್ತು ಸರ್ವಸಭೆಗೂ ಈ ಸಂಗತಿಗಳನ್ನು ಕೇಳಿದವರೆಲ್ಲರಿಗೂ ಮಹಾ ಭಯಹಿಡಿಯಿತು.


ಈ ಮಾತುಗಳನ್ನು ಅನನೀಯನು ಕೇಳಿದ ಕೂಡಲೆ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಹಿಡಿಯಿತು.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟನು. ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಅವರ ಜೊತೆಯಲ್ಲಿರುವದಕ್ಕೆ ವಿುಕ್ಕಾದವರೊಳಗೆ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು;


ಎಲ್ಲರಿಗೂ ಭಯ ಉಂಟಾಯಿತು, ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಅಪೊಸ್ತಲರ ಕೈಯಿಂದ ನಡೆದವು.


ಎಲ್ಲರು ಭಯಹಿಡಿದವರಾಗಿ - ಮಹಾ ಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರಿಗೆ ದರ್ಶನವನ್ನು ಅನುಗ್ರಹಿಸಿದ್ದಾನೆ ಎಂದು ದೇವರನ್ನು ಕೊಂಡಾಡುವವರಾದರು.


ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು; ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತಾಡಿಕೊಳ್ಳುತ್ತಿದ್ದರು.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ಆ ದಿವಸ ದಾವೀದನು ಯೆಹೋವನಿಗೆ ಭಯಪಟ್ಟು - ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವದು ಹೇಗೆ ಎಂದುಕೊಂಡು


ಅಗಮ್ಯದೇವರಾದ ಯೆಹೋವನ ಮುಂದೆ ಯಾರು ನಿಂತಾರು? ಇನ್ನು ಮೇಲೆ ಈತನು ಹೋಗತಕ್ಕ ಸ್ಥಳವಾವದು ಎಂದು ಮಾತಾಡಿಕೊಂಡು


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ಮತ್ತು ದೆವ್ವಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು ಅವರಿಬ್ಬರನ್ನೂ ಸೋಲಿಸಿ ಬಲಾತ್ಕರಿಸಿದ್ದರಿಂದ ಅವರು ಬೆತ್ತಲೆಯಾಗಿಯೂ ಗಾಯವುಳ್ಳವರಾಗಿಯೂ ಆ ಮನೆಯೊಳಗಿಂದ ಓಡಿಹೋದರು.


ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂತು. ಆತನನ್ನು ನಂಬಿದವರಲ್ಲಿ ಅನೇಕರು ಬಂದು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು