Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:22 - ಕನ್ನಡ ಸತ್ಯವೇದವು J.V. (BSI)

22 ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತನ್ನ ಇಬ್ಬರು ಸಹಾಯಕರಾದ ತಿಮೊಥೇಯ ಮತ್ತು ಎರಾಸ್ತನನ್ನು ಮಕೆದೋನಿಯಕ್ಕೆ ಕಳುಹಿಸಿಬಿಟ್ಟು, ತಾನು ಇನ್ನೂ ಸ್ವಲ್ಪಕಾಲ ಏಷ್ಯದಲ್ಲೇ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆ ಹೊವ್ನ್, ತೆನಿ ಅಪ್ಲೆ ಮಜತ್ ಕಾರಿ ತಿಮೊಥಿ, ಅನಿ ಎರಸ್ತಾಕ್ ಮೆಸೆದೊನಿಯಾಕ್ ಧಾಡುನ್ ದಿವ್ನ್ ಅಪ್ನಿ ಆಸ್ಯಾ ಸಿಮೆತ್ ರಾಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:22
18 ತಿಳಿವುಗಳ ಹೋಲಿಕೆ  

ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವನನ್ನು ವಿುಲೇತದಲ್ಲಿ ಬಿಟ್ಟೆನು.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಆಗ ಊರೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕಶಾಲೆಯೊಳಗೆ ನುಗ್ಗಿದರು.


ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯಸೀಮೆಯಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಎಲ್ಲರೂ ಕರ್ತನ ವಾಕ್ಯವನ್ನು ಕೇಳಿದರು.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿವಿುತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.


ಆಮೇಲೆ ಅವನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ಸಲಮೀಸಿಗೆ ಸೇರಿದಾಗ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸಿದರು. ಯೋಹಾನನು ಪರಿಚಾರಕನಾಗಿ ಅವರ ಸಂಗಡ ಇದ್ದನು.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.


ಸಹೋದರರೇ, ಮಕೆದೋನ್ಯದ ಸಭೆಗಳಲ್ಲಿ ದೇವರ ಕೃಪೆಯು ತೋರಿದ ಬಗೆಯನ್ನು ನಿಮಗೆ ತಿಳಿಸುತ್ತೇವೆ.


ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಆಮೇಲೆ ಮಕೆದೋನ್ಯವನ್ನು ಬಿಟ್ಟು ತಿರಿಗಿ ನಿಮ್ಮ ಬಳಿಗೆ ಬಂದು ನಿವ್ಮಿುಂದ ಯೂದಾಯಕ್ಕೆ ಸಾಗಕಳುಹಿಸಲ್ಪಡಬೇಕೆಂದು ಯೋಚಿಸಿದ್ದೆನು.


ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಕೂಡ ಕರೆಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.


ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ; ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.


ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.


ಇದು ಮಾತ್ರವಲ್ಲದೆ ನಾವು ನಡಿಸುವ ಈ ಧರ್ಮಕಾರ್ಯ ಸಂಬಂಧವಾಗಿ ಸಭೆಗಳವರು ಈತನನ್ನು ನಮ್ಮ ಸಂಗಡ ಪ್ರಯಾಣಮಾಡುವಂತೆ ಗೊತ್ತುಮಾಡಿದ್ದಾರೆ. ಅವರು ಹೀಗೆ ಮಾಡಿದ್ದರಿಂದ ಕರ್ತನಿಗೆ ಘನವೂ ನಮ್ಮಲ್ಲಿ ಸಿದ್ಧಮನಸ್ಸೂ ಉಂಟಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು