Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:40 - ಕನ್ನಡ ಸತ್ಯವೇದವು J.V. (BSI)

40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಕೂಟದ ವಿಷಯದಲ್ಲಿ ಇದು ಒಂದು ದಂಗೆ ಎಂಬದಾಗಿ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆದರೆ ನವ್ಮಿುಂದ ಉತ್ತರಕೊಡುವದಕ್ಕೆ ಆಗುವದೇ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಜನರ ವಿಷಯದಲ್ಲಿ ಇದು ಒಂದು ದಂಗೆ ಎಂಬುದಾಗಿ ನಮ್ಮ ಮೇಲೆ ತಪ್ಪುಹೊರಿಸುವುದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆಸಿದರೆ ನಮ್ಮಿಂದ ಉತ್ತರಕೊಡುವುದಕ್ಕೆ ಆಗುವುದೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಈ ದಿನ ನಡೆದ ಘಟನೆಯನ್ನು ದಂಗೆಯೆಂದು ನಮ್ಮ ಮೇಲೆ ಆಪಾದನೆ ಹೊರಿಸುವ ಆಸ್ಪದವಿದೆ. ಏಕೆಂದರೆ, ಈ ಗಲಭೆಗೆ ಸರಿಯಾದ ಕಾರಣವನ್ನು ಕೊಟ್ಟು ಸಮರ್ಥಿಸಿಕೊಳ್ಳಲು ನಿಮ್ಮಿಂದಾಗದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಾನು ಇದನ್ನು ಯಾಕೆ ಹೇಳುತ್ತಿದ್ದೇನೆಂದರೆ, ಇಂದಿನ ಗಲಭೆಯನ್ನು ಕಂಡ ಕೆಲವು ಜನರು ನಾವು ದಂಗೆ ಏಳುತ್ತಿದ್ದೇವೆಂದು ಹೇಳುವ ಸಾಧ್ಯತೆಯಿದೆ. ನಾವು ಈ ಗಲಭೆಯನ್ನು ಸಮರ್ಥಿಸಿಕೊಳ್ಳಲಾಗುವುದಿಲ್ಲ. ಯಾಕೆಂದರೆ ಈ ಸಭೆಗೆ ಸರಿಯಾದ ಕಾರಣವೇ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಈಗ ಇದ್ದ ಪರಿಸ್ಥಿತಿಯಲ್ಲಿ ಇಂದಿನ ಘಟನೆಯಿಂದ ನಾವು ದಂಗೆಯೆದ್ದಿದ್ದೇವೆ ಎಂಬ ಅಪರಾಧ ನಮ್ಮ ಮೇಲೆ ಬರುವ ಆಸ್ಪದವಿದೆ. ಈ ಗಲಭೆಗೆ ಕಾರಣವೇನೆಂದು ವಿವರಿಸಲು ನಮಗೆ ಸಾಧ್ಯವಾಗುವುದಿಲ್ಲ. ಏಕೆಂದರೆ ಇದು ಕಾರಣವಿಲ್ಲದೇ ಎದ್ದ ದಂಗೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಕಶ್ಯಾಕ್ ಮಟ್ಲ್ಯಾರ್, ಅಮಿ ಹಿತ್ತೆ ಲೈ ಘಾತ್ಕೊ ಧಂಗೊ ಉಟ್ವುಲಾಂವ್, ಸಗ್ಳ್ಯಾ ಗದ್ದಲಾಕ್ನಿ ಮಾಪಿ ಕರುಕ್ ಕೊನಾಚೆನ್ಬಿ ಹೊಯ್ನಾ ಅನಿ ಸಮಾ ಕಾರನ್ ದಿವ್ಕ್ ಅಮ್ಚ್ಯೆಕ್ಡೆ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:40
10 ತಿಳಿವುಗಳ ಹೋಲಿಕೆ  

ಕೆಲವು ದಿವಸಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತುಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ ಎಂದು ಕೇಳಿದನು.


ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನಿಸುತ್ತಿದ್ದಾಗ ಯೆರೂಸಲೇವಿುನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲವಿುನ ಸಹಸ್ರಾಧಿಪತಿಗೆ ವರದಿ ಬಂತು.


ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಕೂಡ ಕರೆಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.


ಆದರೂ - ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು ಎಂದು ಮಾತಾಡಿಕೊಂಡರು.


ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ತೀರಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ - ಪಟ್ಟಣದಲ್ಲಿ ಇಂಥ ಗದ್ದಲವೇಕೆ ಎಂದು ವಿಚಾರಿಸುವಾಗಲೇ


ಶ್ರೀಮತ್ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾ ವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರ ರೂಪವಾಗಿ ಬರೆಯುವದಕ್ಕೆ ಅನೇಕರು ಪ್ರಯತ್ನಿಸಿರಲಾಗಿ


ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.


ಈ ಮಾತುಗಳನ್ನು ಹೇಳಿ ಸಭೆಯನ್ನು ಮುರಿದನು.


ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾದರೂ ಅವರಿಗೆ - ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿಮ್ಮ ಕಾರ್ಯವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು