Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:39 - ಕನ್ನಡ ಸತ್ಯವೇದವು J.V. (BSI)

39 ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಹಿ ಗೊಸ್ಟ್ ತುಮ್ಕಾ ತುಮ್ಚ್ಯಾ ಪೊರಾ ಬಾಳಾಕ್ನಿ, ಅನಿ ಲೈ ಧುರ್ ಹೊತ್ತ್ಯಾ ಲೊಕಾಕ್ನಿ ದಿಲ್ಲೆ ಹಾಯ್. ಅಮ್ಚ್ಯಾ ದೆವಾ ಧನಿಯಾನ್ ಅಪ್ನಾಚ್ಯಾ ಜಗ್ಗೊಳ್ ಬಲ್ವಲ್ಲ್ಯಾ ಹರ್ ಎಕ್ಲ್ಯಾಕ್ಬಿ ಹಿ ಗೊಸ್ಟ್ ದಿಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:39
41 ತಿಳಿವುಗಳ ಹೋಲಿಕೆ  

ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.


ಬತ್ತಿದ ಭೂವಿುಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು, ಸುರಿಸುವೆನು.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.


ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರನ್ನು ತನ್ನ ಜನರೆಂದು ಸಾಕ್ಷಿಕೊಟ್ಟನು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಇದಲ್ಲದೆ ಅವನು ನನ್ನ ಸಂಗಡ ಮಾತಾಡುತ್ತಾ - ಯಜ್ಞದ ಕುರಿಯಾದಾತನ ವಿವಾಹದ ಔತಣಕ್ಕೆ ಕರಸಿಕೊಂಡವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿ - ಈ ಮಾತುಗಳು ದೇವರ ಸತ್ಯವಚನಗಳಾಗಿವೆ, ಅಂದನು.


ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.


ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವದು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.


ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ


ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಯಾಕಂದರೆ ಕ್ರಿಸ್ತನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ದೇವಜನಕ್ಕೆ ಸಂಬಂಧಪಟ್ಟವನಾದನು; ಮತ್ತು ಕ್ರಿಸ್ತನಂಬಿಕೆಯಿಲ್ಲದ ಹೆಂಡತಿಯು ನಮ್ಮ ಸಹೋದರನಾದ ತನ್ನ ಗಂಡನಲ್ಲಿ ದೇವಜನಕ್ಕೆ ಸಂಬಂಧಪಟ್ಟವಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ದೇವಜನರಲ್ಲಿ ಸೇರಿದವರೇ ಆಗಿದ್ದಾರೆ.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ಆ ದಿನವನ್ನು ನಾವು ಎದುರುನೋಡುತ್ತಾ ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ - ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ ಸತ್ಕ್ರಿಯೆಗಳಲ್ಲಿ ಸಂತೋಷಿಸುವ ನಿಮ್ಮ ಸಕಲ ಆಲೋಚನೆಯನ್ನೂ ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಸಿದ್ಧಿಗೆ ತರಬೇಕೆಂತಲೂ ಬೇಡಿಕೊಳ್ಳುತ್ತೇವೆ.


ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿದಂತೆ ಅನ್ಯಜನರೊಳಗಿಂದ ಸಹ ಕರೆದನು.


ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ಸಹೋದರರೇ, ನಾನು ಹೇಳುವದನ್ನು ಕೇಳಿರಿ - ದೇವರು ಮೊದಲಲ್ಲಿ ಅನ್ಯಜನರನ್ನು ಕಟಾಕ್ಷಿಸಿನೋಡಿ ತನ್ನ ಹೆಸರಿಗಾಗಿ ಅವರೊಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.


ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ಅವರು ನಾನಾ ಭಾಷೆಗಳನ್ನಾಡುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ಕೇಳಿದಾಗ - ಅನ್ಯಜನಗಳಿಗೂ ಪವಿತ್ರಾತ್ಮ ದಾನ ಮಾಡಲ್ಪಟ್ಟಿದೆಯಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ನಡೆದ ಸಂಗತಿಯನ್ನು ಪೇತ್ರನು ನೋಡಿ -


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.


ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು