Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:24 - ಕನ್ನಡ ಸತ್ಯವೇದವು J.V. (BSI)

24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕಾಯ್ ಬಿ ಹೊಂವ್ದಿತ್, ಮಿಯಾ ಮಾಜ್ಯಾ ಸ್ವತಾಚ್ಯಾ ಜಿವಾಚ್ಯಾ ವಿಶಯಾತ್ ಚಿಂತಾ ಕರಿನಾ ಮಾಕಾ ಧನಿಯಾ ಜೆಜುನ್ ದಿಲ್ಲಿ ಎಕುಚ್ ಗುರಿ ಹಾಯ್, ಮಾಜೆ ಪಳಾಪ್ ಮಿಯಾ ಪಳುನ್ ಸಾರುಚೆ, ತೆ ದೆವಾಚ್ಯಾ ಬರ್‍ಯಾ ಖಬ್ರೆಚ್ಯಾ ಕುರ್ಪೆಕ್ ಸಾಕ್ಷಿ ಹೊತಲ್ಲೆ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:24
59 ತಿಳಿವುಗಳ ಹೋಲಿಕೆ  

ಆದದರಿಂದ ನಾವು ದೇವರ ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಟ್ಟು ಹಿಂದೆಗೆಯುವದಿಲ್ಲ.


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ಕೃಪೆಯಿಂದ ಆದುಕೊಂಡನು ಅಂದ ಮೇಲೆ ಪುಣ್ಯಕ್ರಿಯೆಗಳ ಕಾರಣದಿಂದ ಆದುಕೊಳ್ಳಲಿಲ್ಲವಷ್ಟೆ; ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವದಕ್ಕಾಗುವದಿಲ್ಲ.


ಹೀಗಿರಲಾಗಿ ಪೌಲ ಬಾರ್ನಬರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತಾಡುತ್ತಿದ್ದರು.


ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಾನು ಸಂಕ್ಷೇಪವಾಗಿ ಬರೆದು ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನೂ


ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ.


ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.


ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಯೂದನು ನಮ್ಮ ಲೆಕ್ಕದಲ್ಲಿ ಸೇರಿ ಈ ಸೇವೆಯಲ್ಲಿ ಪಾಲು ಹೊಂದಿದವನಾಗಿದ್ದನು.


ಮಾಡಬೇಕೆಂದು ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ನಿನ್ನನ್ನು ಭೂಲೋಕದಲ್ಲಿ ಮಹಿಮೆಪಡಿಸಿದೆನು.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸುತ್ತೇನೆ.


ಆದದರಿಂದ ನಿಮ್ಮ ನಿವಿುತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನವನ್ನು ಉಂಟುಮಾಡುತ್ತವಷ್ಟೆ.


ನಿಮ್ಮಲ್ಲಿ ನನಗೆ ಬಹಳ ಭರವಸ ಉಂಟು; ನಿಮ್ಮ ವಿಷಯದಲ್ಲಿ ನನ್ನ ಉತ್ಸಾಹ ಬಹಳ; ಪರಿಪೂರ್ಣ ಆದರಣೆ ನನಗಾಯಿತು; ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ತುಂಬಿದ್ದೇನೆ.


ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.


ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.


ಕೆಲಸ ಮಾಡಿದವನಿಗೆ ಬರುವ ಕೂಲಿಯು ದಯದಿಂದ ದೊರಕುವಂಥದೆಂದು ಎಣಿಕೆಯಾಗುವದಿಲ್ಲ; ಅದು ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವದು.


ನೀವು ಮೊದಲಿನಿಂದ ನನ್ನ ಸಂಗಡ ಇದ್ದ ಕಾರಣ ನೀವೂ ಸಾಕ್ಷಿಗಳಾಗಿದ್ದೀರಿ.


ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಂದಾರು; ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ಹೇಳಲಿ ಅಂದನು.


ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ - ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದದ ಕೆರಗಳನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.


ಪೇತ್ರನು ಎದ್ದು ಅವರಿಗೆ - ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದದೆ.


ಸೀಲನೂ ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಬರಬೇಕಾದ ಕ್ರಿಸ್ತನೆಂದು ಯೆಹೂದ್ಯರಿಗೆ ಖಂಡಿತವಾಗಿ ಸಾಕ್ಷಿ ಹೇಳಿದನು.


ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು.


ಅವರಲ್ಲಿ ಒಬ್ಬೊಬ್ಬನಿಗೆ ಒಂದೊಂದು ಬಿಳಿ ನಿಲುವಂಗಿಯು ಕೊಡಲ್ಪಟ್ಟಿತು. ಇದಲ್ಲದೆ - ನಿಮ್ಮ ಹಾಗೆ ಕೊಲೆಯಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆದಾಸರ ಸಂಖ್ಯೆಯೂ ಪೂರ್ಣವಾಗುವ ತನಕ ಇನ್ನೂ ಸ್ವಲ್ಪ ಕಾಲ ವಿಶ್ರವಿುಸಿಕೊಂಡಿರಬೇಕೆಂದು ಅವರಿಗೆ ಉತ್ತರವಾಯಿತು.


ಕೂಡಲೆ ಆ ಮೂರು ಮಂದಿ ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ ಬೇತ್ಲೆಹೇವಿುನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು.


ಹೀಗೆ ನಮ್ಮಲ್ಲಿ ಮರಣವು ಪ್ರವರ್ತಿಸುತ್ತದೆ; ಆದರೆ ನಿಮ್ಮಲ್ಲಿ ಜೀವವು ಪ್ರವರ್ತಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು