Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:28 - ಕನ್ನಡ ಸತ್ಯವೇದವು J.V. (BSI)

28 ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತುಮ್ಕಾಚ್ ತುಮಿ ತೆಚ್ಯಾ ಹುಶ್ಯಾರ್ಕಿನ್ ರಾಕುನ್ ಘೆವಾ. ಪವಿತ್ರ್ ಆತ್ಮ್ಯಾನ್ ತ್ಯಾ ದಿಸಿ ತುಮ್ಕಾ ದಿಲ್ಯಾ ಬಕ್ರಾಂಚ್ಯಾ ತಾಂಡ್ಯಾಕ್ ಉಶಾರ್ಕಿನ್ ಬಗುನ್ಗೆವಾ, ದೆವಾಚ್ಯಾ ತಾಂಡ್ಯಾಚ್ಯಾ ಬಕ್ರಿಯಾ ರಾಕ್ತಲ್ಯಾಂಚ್ಯಾ ಸಾರ್ಕೆ ರ್‍ಹಾವಾ, ತೆ ತೆನಿ ಅಪ್ಲ್ಯಾ ಸ್ವತಾಚ್ಯಾ ಲೆಕಾಚ್ಯಾ ರಗ್ತಾನ್ ಇಕಾತ್ ಘೆಟ್ಲಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:28
61 ತಿಳಿವುಗಳ ಹೋಲಿಕೆ  

ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗೆತ್ತಿಕೊಳ್ಳುವನು. ಹಾಲುಕುಡಿಸುವ ಕುರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.


ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.


ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ಪ್ರಸಂಗದಲ್ಲಿಯೂ ಉಪದೇಶದಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.


ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.


ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಂಬರಿಸುವನು?


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.


ದೇವರು ಸಂಪಾದಿಸಿಕೊಂಡ ಜನರಿಗೆ ವಿಮೋಚನೆಯಾಗುವದೆಂಬದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಆ ವಿಮೋಚನೆಯು ದೇವರ ಮಹಿಮೆಗೆ ಎಷ್ಟೋ ಪ್ರಖ್ಯಾತಿಯನ್ನು ಉಂಟುಮಾಡುವದು.


ಹಿಂದೆ ನಾನು ಯೆಹೂದ್ಯಮತದಲ್ಲಿದ್ದಾಗ ನನ್ನ ನಡತೆ ಎಂಥದೆಂದು ನೀವು ಕೇಳಿದ್ದೀರಷ್ಟೆ. ನಾನು ದೇವರ ಸಭೆಯನ್ನು ಅತ್ಯಂತವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.


ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವದಿಲ್ಲ.


ಅವನು ವಿುಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರಿಸಿದನು.


ಇದಲ್ಲದೆ ಪ್ರತಿಸಭೆಯಲ್ಲಿ ಸಭೆಯವರ ಸಮ್ಮತಿಯಿಂದ ಹಿರಿಯರನ್ನು ಗೊತ್ತು ಮಾಡಿ ನೇವಿುಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಅರ್ಖಿಪ್ಪನಿಗೆ - ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.


ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.


ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ


ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.


ಏನು, ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವದಿಲ್ಲ.


ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟುಮಾತ್ರವೂ ಸಣ್ಣದಲ್ಲ. ಒಬ್ಬ ಅಧಿಪತಿ ನಿನ್ನೊಳಗಿಂದಲೇ ಹೊರಡುವನು, ಆತನು ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕವನು ಎಂಬದಾಗಿ ಪ್ರವಾದಿಯ ಮುಖಾಂತರ ಬರೆದದೆ ಎಂದು ಹೇಳಿದರು.


ನನ್ನ ದೇವರಾದ ಯೆಹೋವನು ಹೀಗೆ ಅಪ್ಪಣೆಕೊಟ್ಟನು - ಕೊಯ್ಗುರಿಗಳ ಮಂದೆಯನ್ನು ಕಾಯಿ;


ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದೆಯುತ್ತೀರಿ, ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವದಿಲ್ಲ.


[ಚೀಯೋನೇ] ಕಣ್ಣೆತ್ತು, ಬಡಗಲಿಂದ ಬರುವವರನ್ನು ನೋಡು; ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಶಿಷ್ಟರ ಭಾಷಣ ಬಹುಜನಪೋಷಣ; ಬುದ್ಧಿಯ ಕೊರತೆ ಮೂರ್ಖರ ನಾಶನ.


ನೀನು ಹಿಂದಿನ ಕಾಲದಲ್ಲಿ ಸ್ವಕುಲವಾಗಿರಬೇಕೆಂದು ಬಿಡಿಸಿ ಸಂಪಾದಿಸಿಕೊಂಡ ನಿನ್ನ ಮಂಡಲಿಯನ್ನು ಜ್ಞಾಪಿಸಿಕೋ; ನಿನ್ನ ವಾಸಸ್ಥಾನವಾಗಿದ್ದ ಚೀಯೋನ್‍ಗಿರಿಯನ್ನು ಮರೆಯಬೇಡ.


ಜನಾಂಗಗಳೇ, ಯೆಹೋವನ ವಾಕ್ಯವನ್ನು ಕೇಳಿರಿ, ದೂರದ್ವೀಪಗಳಲ್ಲಿ ಸಾರಿರಿ! ಇಸ್ರಾಯೇಲ್ಯರನ್ನು ಚದರಿಸಿದಾತನು ಕುರುಬನು ಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನು ಎಂದು ಪ್ರಕಟಿಸಿರಿ.


ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳೆಲ್ಲಾ ನಿಮ್ಮನ್ನು ವಂದಿಸುತ್ತವೆ.


ನೀವು ನಿಮ್ಮ ಸ್ವಂತ ಸೊತ್ತಲ್ಲ; ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು; ಆದಕಾರಣ ನಿಮ್ಮ ದೇಹದಲ್ಲಿ ದೇವರ ಪ್ರಭಾವವನ್ನು ಪ್ರಕಾಶಪಡಿಸಿರಿ.


ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳಬೇಕೆಂದಿರುವವನು ಒಳ್ಳೇ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು