Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:31 - ಕನ್ನಡ ಸತ್ಯವೇದವು J.V. (BSI)

31 ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆಸೆ ಹೊವ್ನ್, ಮಿಯಾ ರಡುನ್ಗೆತ್ ತಿನ್ ವರ್ಸಾಚೊ ದಿಸ್ ತುಮ್ಚ್ಯಾತ್ಲ್ಯಾ ಹರ್ ಎಕ್ಲ್ಯಾಕ್ಬಿ ಶಿಕ್ವಲ್ಲೆ ಹುಶ್ಯಾರ್ಕಿನ್ ಯಾದ್ ಥವ್ನ್ ಘೆವಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:31
22 ತಿಳಿವುಗಳ ಹೋಲಿಕೆ  

ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು.


ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯಸೀಮೆಯಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಎಲ್ಲರೂ ಕರ್ತನ ವಾಕ್ಯವನ್ನು ಕೇಳಿದರು.


ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತಾಡಿದನು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವಂತೆ ನೋಡಿರಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಆದರೆ ಜನರು ನಿದ್ರೆಮಾಡುವ ಕಾಲದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಬಿತ್ತಿ ಹೋದನು.


(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)


ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟಮಾಡಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನಮಾಡಿಕೊಂಡೆವು.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮಗೆ ಬುದ್ಧಿ ಹೇಳುವದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.


ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು.


ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಸಲ್ಲಾಪಮಾಡಿ ಹಾಗೆ ಹೊರಟುಹೋದನು.


ವಾರದ ಮೊದಲನೆಯ ದಿವಸದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಕೂಡಿಬಂದಾಗ ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಸರಿಹೊತ್ತಿನವರೆಗೂ ಉಪನ್ಯಾಸವನ್ನು ನಡಿಸಿದನು.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ನೀನು ಶಿಷ್ಟನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆಹೋದರೆ ಎಚ್ಚರಗೊಂಡ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ಯಾಕಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.


ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು