Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:35 - ಕನ್ನಡ ಸತ್ಯವೇದವು J.V. (BSI)

35 ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಸಗ್ಳ್ಯಾ ವಿಶಯಾಕ್ನಿ ಮಿಯಾಚ್ ತುಮ್ಕಾ ಉದಾರನ್ ದಾಕ್ವುನ್ ದಿಲಾ, ತುಮಿ ಬಿ ತಸೆಚ್ ರಾಬುನ್ ಬಳ್ ನಸಲ್ಯಾಕ್ನಿ ಮಜ್ಜತ್ ಕರುಚೆ ಅನಿ “ಘೆತಲ್ಯಾಚ್ಯಾಕಿಂತಾ ದಿತಲ್ಯಾತ್ ಲೈ ಆಶಿರ್ವಾದ್ ಹಾಯ್” ಮನುನ್ ಧನಿಯಾ ಜೆಜುನ್ ಸಾಂಗಲಿ ಗೊಸ್ಟ್ ಯಾದ್ ಥವ್ನ್ ಘೆವಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:35
28 ತಿಳಿವುಗಳ ಹೋಲಿಕೆ  

ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಸಹೋದರರೇ, ಅಕ್ರಮವಾಗಿ ನಡೆಯುವವರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರಲ್ಲಿಯೂ ದೀರ್ಘಶಾಂತರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.


ದೃಢವಾದ ನಂಬಿಕೆಯುಳ್ಳ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ ದೃಢವಿಲ್ಲದವರ ಅನುಮಾನಗಳನ್ನು ಸಹಿಸಿಕೊಳ್ಳಬೇಕು.


ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.


ಸೆರೆಯವರ ಸಂಗಡ ನೀವೂ ಜೊತೆ ಸೆರೆಯವರೆಂದು ಭಾವಿಸಿಕೊಂಡು ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ನಿಮಗೂ ಅನ್ಯಾಯ ಸಂಭವಿಸೀತೆಂದು ತಿಳಿದು ಅನ್ಯಾಯ ಅನುಭವಿಸುವವರನ್ನು ನೆನಸಿರಿ. ದಾಂಪತ್ಯವು ಮಾನ್ಯವಾದದ್ದೆಂದು ಎಲ್ಲರೂ ಎಣಿಸಬೇಕು;


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು.


ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯದಲ್ಲಿಯೂ ನಿಮ್ಮನ್ನು ವಿುಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ. ನಾನು ಮಾಡಿದ ಈ ಅನ್ಯಾಯವನ್ನು ಕ್ಷವಿುಸಿರಿ.


ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ; ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.


ಇದಲ್ಲದೆ ನಾನು ನಿಮಗೆ ಆಜ್ಞೆಕೊಟ್ಟ ಪ್ರಕಾರ ನೀವು ಮತ್ತೊಬ್ಬರ ಕಾರ್ಯದಲ್ಲಿ ತಲೆಹಾಕದೆ ಸುಮ್ಮಗಿದ್ದು ಸ್ವಂತ ಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದೇ ಮಾನವೆಂದೆಣಿಸಿರಿ.


ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು. ಅವರು ಯಾವದರಲ್ಲಿ ಹಿಗ್ಗುತ್ತಾರೋ ಅದರಲ್ಲಿ ನಮ್ಮಂತೆಯೇ ನಡೆಯುವವರಾಗಿ ಕಂಡು ಬರಲಿ.


ಈ ಹಕ್ಕು ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಹಕ್ಕನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.


ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು. ಆಗ ಅವರೆಲ್ಲರು ಬಹಳವಾಗಿ ಅತ್ತರು.


ಯಾಕಂದರೆ ಅವರು ಕ್ರಿಸ್ತನ ಹೆಸರನ್ನು ಪ್ರಸಿದ್ಧಿಪಡಿಸುವದಕ್ಕೋಸ್ಕರ ಹೊರಟುಹೋಗಿದ್ದಾರೆ ಮತ್ತು ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು