Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:6 - ಕನ್ನಡ ಸತ್ಯವೇದವು J.V. (BSI)

6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿವಸಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸದಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿವಸಗಳಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾವು ಹುಳಿರಹಿತ ರೊಟ್ಟಿಯ ಹಬ್ಬದ ನಂತರ ಫಿಲಿಪ್ಪಿಯಿಂದ ನೌಕಾಯಾನ ಹೊರಟೆವು. ಐದು ದಿನಗಳ ನಂತರ ತ್ರೋವದಲ್ಲಿ ಅವರನ್ನು ಸೇರಿ, ಅಲ್ಲಿ ಏಳುದಿನ ತಂಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೂದ್ಯರ ಹುಳಿ ರಹಿತ ರೊಟ್ಟಿ ಹಬ್ಬದ ನಂತರ ನಾವು ಫಿಲಿಪ್ಪಿ ಪಟ್ಟಣದ ಹಡಗಿನಲ್ಲಿ ಹೋದೆವು. ಐದು ದಿನಗಳಾದ ನಂತರ ನಾವು ಇವರನ್ನು ತ್ರೋವದಲ್ಲಿ ಸಂಧಿಸಿದೆವು. ಅಲ್ಲಿ ನಾವು ಏಳು ದಿನ ತಂಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಫುಗ್ ನಸಲ್ಲ್ಯಾ ಬಾಕ್ರಿಚ್ಯಾ ಸನಾಚ್ಯಾ ಮಾನಾ ಅಮಿ ಫಿಲಿಪ್ಪಿ ಮನ್ತಲ್ಯಾ ಶಾರಾಚ್ಯಾ ಢೊನಿತ್ ಗೆಲಾಂವ್, ಪಾಚ್ ದಿಸಾ ಕಳದ್ಲ್ಯಾ ಮಾನಾ ಅಮಿ ತೆಂಕಾ ತ್ರೊವಾಸ್ ಶಾರಾತ್ ಭೆಟ್ಲ್ಯಾಂವ್ ಅಮಿ ಥೈ ಸಾತ್ ದಿಸಾ ರಾಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:6
18 ತಿಳಿವುಗಳ ಹೋಲಿಕೆ  

ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ನೋಡಿ ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಹಿಡಿಸಿದನು. ಆ ಕಾಲದಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.


ಫಿಲಿಪ್ಪಿ ಎಂಬದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣವೂ ರೋಮಾಪುರದವರ ಒಂದು ಪ್ರವಾಸಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ಮಾಸದಲ್ಲೇ ಐಗುಪ್ತದೇಶದಿಂದ ಹೊರಟುಬಂದಿರಲ್ಲಾ. ಒಬ್ಬನೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಕೂಡದು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರ ಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರ ಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲಾ.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ಅಲ್ಲಿ ಕ್ರೈಸ್ತ ಸಹೋದರರು ಸಿಕ್ಕಿದರು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿವಸ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.


ಮರುದಿನ ಹೊರಟು ಕೈಸರೈಯಕ್ಕೆ ಬಂದು ಸೌವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳ್ವರಲ್ಲಿ ಒಬ್ಬನು.


ಅಲ್ಲಿ ಶಿಷ್ಯರನ್ನು ಹುಡುಕಿ ಕಂಡು ಏಳು ದಿವಸ ನಿಂತೆವು. ಅವರು ಆತ್ಮನ ಪ್ರೇರಣೆಯಿಂದ ಪೌಲನಿಗೆ - ನೀನು ಯೆರೂಸಲೇವಿುಗೆ ಕಾಲಿಡಬೇಡವೆಂದು ಹೇಳಿದರು.


ಆಗ ಅವರು ಮೂಸ್ಯವನ್ನು ಸುಮ್ಮನೆ ದಾಟಿ ತ್ರೋವಕ್ಕೆ ಬಂದರು.


ಅವನಿಗೆ ಆ ದರ್ಶನವಾದ ಮೇಲೆ ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು ಕೂಡಲೆ ಮಕೆದೋನ್ಯಕ್ಕೆ ಹೊರಟು ಹೋಗುವ ಪ್ರಯತ್ನಮಾಡಿದೆವು.


ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇವಿುನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು