Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:11 - ಕನ್ನಡ ಸತ್ಯವೇದವು J.V. (BSI)

11 ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ಅಮ್ಚ್ಯಾ ಜಗ್ಗೊಳ್ ಯೆವ್ನ್ , ಪಾವ್ಲುಚೊ ಖಬ್ರೆಚೊ ಪಟ್ಟೊ ಕಾಡುನ್ ಘೆವ್ನ್ ಅಪ್ಲಿ ಹಾತಾ ಪಾಯಾ ಭಾಂದುನ್ ಘೆವ್ನ್ ಹ್ಯೊ ಕಂಬ್ರೆಚೊ ಪಟ್ಟೊ ಕೊನಾಚೊ, ತ್ಯಾ ಮಾನ್ಸಾಕ್ ಜೆರುಜಲೆಮಾತ್ಲಿ ಜುದೆವಾಂಚಿ ಲೊಕಾ ಅಶೆ ಬಾಂಧುನ್ ಘಾಲ್ತಾತ್, ಅನಿ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಒಪ್ಸುನ್ ದಿತ್ಯಾತ್, ಮನುನ್ ಪವಿತ್ರ್ ಆತ್ಮೊ ಸಾಂಗುಲ್ಲಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:11
34 ತಿಳಿವುಗಳ ಹೋಲಿಕೆ  

ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -


ನಿನಗೆ ಬೇಡಿಗಳೂ ಸಂಕಟಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಖಂಡಿತವಾಗಿ ಹೇಳುತ್ತಾನೆ; ಇಷ್ಟು ಮಾತ್ರ ಬಲ್ಲೆನು.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ [ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂದನು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.


ಆದದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ - ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಆ ಸತ್ಯಾರ್ಥದ ನಿವಿುತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ, ಅದರ ವಿಷಯದಲ್ಲಿ ಧೈರ್ಯವಾಗಿ ಮಾತಾಡುವ ಹಂಗಿನಲ್ಲಿದ್ದೇನೆ; ಹಾಗೆಯೇ ನಾನು ಮಾತಾಡಬೇಕೆಂದು ನನಗೋಸ್ಕರ ಬೇಡಿಕೊಳ್ಳಿರಿ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ನಡೆದುಕೊಳ್ಳಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಅವರಲ್ಲಿ ಐಕಮತ್ಯವಿಲ್ಲದೆ ಇರುವಾಗ ಪೌಲನು ಅವರಿಗೆ - ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ


ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿವಿುತ್ತವಾಗಿ ಈ ಬೇಡಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.


ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿದನು. ಅವರು ಕೂಡಿದ ಮೇಲೆ ಅವನು ಅವರಿಗೆ - ಸಹೋದರರೇ, ನಾನು ನಮ್ಮ ಜನರಿಗೂ ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇವಿುನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.


ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.


ಅವರು ಪೌಲನನ್ನು ಬೊಗ್ಗಿಸಿ ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು - ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ ಕೊರಡೆಗಳಿಂದ ಹೊಡಿಸುವದು ನಿಮಗೆ ನ್ಯಾಯವೋ? ಎಂದು ಕೇಳಿದನು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ


ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯ ದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡಿಸಿದ್ದೇನೆ.


ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ - ಏಳು, ಸೊಂಟದಿಂದ ಗೋಣಿತಟ್ಟನ್ನು ಬಿಚ್ಚು, ಕಾಲಿನಿಂದ ಕೆರವನ್ನು ಕಳಚು ಎಂದು ಇತರರಿಗೆ ಸೂಚನೆಯಾಗಿ ಅಪ್ಪಣೆಕೊಟ್ಟನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರುಗುತ್ತಿದ್ದನು.


ಯೆಹೋವನು ನನಗೆ ಹೀಗೆ ಹೇಳಿದನು - ಹೊರಡು, ಕುಂಬಾರನು ಮಾಡಿದ ಮಣ್ಣಿನ ಕೂಜವನ್ನು ಕೊಂಡುಕೊಂಡು ಜನರ ಹಿರಿಯರಲ್ಲಿಯೂ ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಕರೆದುಕೊಂಡು


ಯೇಸು ಇದನ್ನು ಹೇಳಿದ ಮೇಲೆ ತನ್ನ ಶಿಷ್ಯರ ಸಂಗಡ ಕೆದ್ರೋನ್ ಹಳ್ಳದ ಆಚೆಗೆ ಹೊರಟುಹೋದನು. ಅಲ್ಲಿ ಒಂದು ತೋಟವಿತ್ತು; ಅದರೊಳಕ್ಕೆ ಆತನೂ ಆತನ ಶಿಷ್ಯರೂ ಹೋದರು.


ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು.


ಅಲ್ಲಿ ಶಿಷ್ಯರನ್ನು ಹುಡುಕಿ ಕಂಡು ಏಳು ದಿವಸ ನಿಂತೆವು. ಅವರು ಆತ್ಮನ ಪ್ರೇರಣೆಯಿಂದ ಪೌಲನಿಗೆ - ನೀನು ಯೆರೂಸಲೇವಿುಗೆ ಕಾಲಿಡಬೇಡವೆಂದು ಹೇಳಿದರು.


ಆದರೂ ಮುಂದಣ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು