Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:13 - ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಪೌಲನು, “ನೀವು ಯಾಕೆ ಅಳುತ್ತಿರುವಿರಿ? ನೀವು ನನಗೆ ಬಹು ದುಃಖವನ್ನು ಯಾಕೆ ಉಂಟು ಮಾಡುತ್ತಿದ್ದೀರಿ? ನಾನು ಜೆರುಸಲೇಮಿನಲ್ಲಿ ಬಂಧಿಸಲ್ಪಡುವುದಕ್ಕಲ್ಲದೆ ಪ್ರಭು ಯೇಸುವಿನ ಹೆಸರಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಪಾವ್ಲುನ್ ತುಮಿ ಕಶ್ಯಾಕ್ ರಡುನ್ಗೆತ್ ಮಾಜೆ ಹಿರ್‍ದೆ ಫುಟಿ ಸಾರ್ಕೆ ಕರುಲ್ಲ್ಯಾಸಿ? ಮಿಯಾ ಜೆರುಜಲೆಮಾತ್ ಬಂಧಿಹೊವ್ಕ್ ಥವ್ಡೆಚ್ ನ್ಹಯ್ ಧನಿಯಾ ಜೆಜುಚ್ಯಾ ನಾವಾಸಾಟಿ ಮರುಕ್ಬಿ ತಯಾರ್ ಹಾಂವ್ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:13
25 ತಿಳಿವುಗಳ ಹೋಲಿಕೆ  

ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷ, ನಿಮ್ಮೆಲ್ಲರ ಕೂಡ ಸಂತೋಷ.


ಯಾಕಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸಮೀಪಕ್ಕೆ ಬಂದದೆ.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು. ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸುತ್ತೇನೆ.


ಯಾಕಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ಈ ಗುಡಾರವನ್ನು ಕಿತ್ತುಹಾಕುವ ಕಾಲ ಬೇಗನೇ ಬರುತ್ತದೆಂದು ಬಲ್ಲೆನು.


ನೀವು ಇನ್ನು ಮೇಲೆ ನನ್ನ ಮುಖವನ್ನು ಕಾಣುವದಿಲ್ಲವೆಂದು ಪೌಲನು ಹೇಳಿದ ಮಾತಿಗೆ ಅವರು ವಿಶೇಷವಾಗಿ ವ್ಯಥೆಪಟ್ಟು ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ಆಮೇಲೆ ಅವರು ಅವನನ್ನು ಹಡಗಿಗೆ ಸಾಗಕಳುಹಿಸಿದರು.


ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ


ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ನಾನು ನಿನ್ನ ಕಣ್ಣೀರುಗಳನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಅಪೇಕ್ಷಿಸುತ್ತೇನೆ.


ಸಹೋದರರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗಿರುವ ಹೆಚ್ಚಳದ ಮೇಲೆ ಆಣೆ ಇಟ್ಟು ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು ಮತ್ತು ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ವ್ಯಸನಪಟ್ಟನು.


ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.


ತಂದೆಗಳು ಹುಳಿದ್ರಾಕ್ಷೆಯನ್ನು ತಿಂದರು, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವದೇಕೆ?


ನೀವು ನನ್ನ ಜನರನ್ನು ಜಜ್ಜಿ ಬಡವರ ಮುಖವನ್ನು ಹಿಂಡುವದೇಕೆ ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.


ಅದಕ್ಕೆ ಸಮುವೇಲನು - ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ ಎನ್ನಲು


ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ - ಹನ್ನಾ, ಏಕೆ ಅಳುತ್ತೀ? ಉಣ್ಣದಿರುವದಕ್ಕೇನು ಕಾರಣ? ನೀನು ವ್ಯಸನಪಡುವದೇಕೆ? ನಾನು ನಿನಗೆ ಹತ್ತು ಮಂದಿ ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ ಅಂದನು.


ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇವಿುನವರ ಮತ್ತು ಯೆಹೂದ್ಯರ ಗುಂಪನ್ನು ಬಾಬೆಲಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.


ಕೂಡಲೆ ಆ ಮೂರು ಮಂದಿ ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ ಬೇತ್ಲೆಹೇವಿುನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು