Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:27 - ಕನ್ನಡ ಸತ್ಯವೇದವು J.V. (BSI)

27 ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಕಲಕಿ ಅವನನ್ನು ಹಿಡಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಶುದ್ಧಾಚಾರದ ಏಳು ದಿನಗಳ ಅವಧಿ ಮುಗಿಯುತ್ತಿದ್ದಂತೆ ಏಷ್ಯದ ಕೆಲವು ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡರು. ಕೂಡಲೇ ಅವರು ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಏಳು ದಿನಗಳ ಅವಧಿ ಮುಗಿಯುವುದರಲ್ಲಿತ್ತು. ಆದರೆ ಏಷ್ಯಾದಿಂದ ಬಂದಿದ್ದ ಕೆಲವು ಯೆಹೂದ್ಯರು ಪೌಲನನ್ನು ಕಂಡು ಜನಸಮೂಹವನ್ನು ಉದ್ದೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಳು ದಿನಗಳ ಅವಧಿ ಮುಗಿಯುತ್ತಿದ್ದಾಗ, ಏಷ್ಯಾ ಪ್ರಾಂತದ ಕೆಲವು ಯೆಹೂದ್ಯ ಜನರು ದೇವಾಲಯದಲ್ಲಿ ಪೌಲನನ್ನು ಕಂಡರು. ಅವರು ಇಡೀ ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತಿ ಸಾತ್ ದಿಸಾ ಸರ್ತಲ್ಯಾ ಯೆಳಾರ್ ಹೊತ್ತಿ, ಖರೆ ಎಶ್ಯಾಕ್ನಾ ಯೆಲ್ಲಿ ಜುದೆವಾಂಚಿ ಲೊಕಾನಿ ಪಾವ್ಲುಕ್ ಗುಡಿತ್ ಬಗುನ್ ತೆಂಕಾ ಪಗ್ಳುನ್ ಧುರ್ ಕರುನ್ ತೆಕಾ ಧರುನ್ ಘೆವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:27
24 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕೆ ಪ್ರಯತ್ನಿಸಿದರು.


ನಾನು ಶುದ್ಧಮಾಡಿಕೊಂಡವನಾಗಿ ಅವುಗಳನ್ನು ಒಪ್ಪಿಸುತ್ತಿರುವಲ್ಲಿ ನನ್ನನ್ನು ದೇವಾಲಯದಲ್ಲಿ ಕಂಡರು. ನನ್ನ ಬಳಿಯಲ್ಲಿ ಜನರ ಗುಂಪು ಇರಲಿಲ್ಲ, ಗದ್ದಲವೂ ಇರಲಿಲ್ಲ.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ಗಲ್ಲಿಯೋನನು ಅಖಾಯದ ಅಧಿಪತಿಯಾಗಿರಲು ಯೆಹೂದ್ಯರು ಒಗ್ಗಟ್ಟಾಗಿ ಪೌಲನ ಮೇಲೆ ಬಿದ್ದು ಅವನನ್ನು ನ್ಯಾಯಸ್ಥಾನದ ಮುಂದೆ ಹಿಡಿತಂದು -


ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸುತ್ತಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿ ಕಲಕಿದರು.


ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.


ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ


ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.


ಜನರನ್ನೂ ಹಿರಿಯರನ್ನೂ ಶಾಸ್ತ್ರಿಗಳನ್ನೂ ರೇಗಿಸಿದರು; ಮತ್ತು ಬಂದು ಅವನನ್ನು ಹಿಡಿದು ಹಿರೀಸಭೆಗೆ ತೆಗೆದುಕೊಂಡು ಹೋಗಿ


ಮತಾಭಿಮಾನದಿಂದ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಪಟ್ಟಣದ ಕಾವಲಿನಲ್ಲಿಟ್ಟರು.


ಅವರನ್ನು ಹಿಡಿದು ಆಗಲೇ ಸಾಯಂಕಾಲವಾಗಿದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.


ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಯಾವನಾದರೂ ಅಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತದರಿಂದ ತಾನು ಪ್ರತಿಷ್ಠಿಸಿಕೊಂಡ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.


ನಾಜೀರನು ತನ್ನ ವ್ರತದಿನಗಳು ಮುಗಿದಾಗ ನಡೆಯಬೇಕಾದ ಕ್ರಮ. ಅವನು ದೇವದರ್ಶನದ ಗುಡಾರದ ಬಾಗಲಿಗೆ ಬಂದು ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವವಂದರೆ -


ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಪಾರ್ಥ್ಯರೂ ಮೇದ್ಯರೂ ಏಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ,


ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ ಅವರು ಫ್ರುಗ್ಯ ಗಲಾತ್ಯ ಸೀಮೆಯನ್ನು ಹಾದುಹೋಗಿ


ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು.


ನಾನು ದೇವಾರಾಧನೆಮಾಡುವದಕ್ಕೆ ಯೆರೂಸಲೇವಿುಗೆ ಹೋಗಿ ಹನ್ನೆರಡು ದಿವಸ ಮಾತ್ರವಾಯಿತೆಂದು ನೀನು ತಿಳಿದುಕೊಳ್ಳಬಹುದು.


ಆತನ ಸೇವೆಯಲ್ಲಿ ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನದಿಗಳ ಅಪಾಯಗಳೂ ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳುಸಹೋದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು