Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:31 - ಕನ್ನಡ ಸತ್ಯವೇದವು J.V. (BSI)

31 ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನಿಸುತ್ತಿದ್ದಾಗ ಯೆರೂಸಲೇವಿುನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲವಿುನ ಸಹಸ್ರಾಧಿಪತಿಗೆ ವರದಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಜನರ ಗುಂಪು ಪೌಲನನ್ನು ಕೊಲ್ಲಲು ಯತ್ನಿಸುತ್ತಿದ್ದಾಗ ಜೆರುಸಲೇಮಿನಾದ್ಯಂತ ಗಲಭೆಯುಂಟಾಗಿದೆ ಎಂದು ಅಲ್ಲಿನ ರೋಮ್ ಸೈನ್ಯಾಧಿಪತಿಗೆ ವರದಿ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವರು ಪೌಲನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾಗ ಇಡೀ ಪಟ್ಟಣದಲ್ಲೇ ಗಲಭೆಯುಂಟಾಗಿದೆ ಎಂಬ ಸುದ್ದಿಯು ಜೆರುಸಲೇಮಿನಲ್ಲಿದ್ದ ರೋಮ್ ಸೇನಾಧಿಪತಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವರು ಪೌಲನನ್ನು ಕೊಲ್ಲುವುದಕ್ಕೆ ಪ್ರಯತ್ನಿಸುತ್ತಿದ್ದಾಗ, ಯೆರೂಸಲೇಮ ಪಟ್ಟಣದಲ್ಲೆಲ್ಲಾ ಗೊಂದಲವೆದ್ದಿದೆ ಎಂಬ ಸುದ್ದಿ ಅಲ್ಲಿದ್ದ ರೋಮ್ ಸಹಸ್ರಾಧಿಪತಿಗೆ ತಲುಪಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆನಿ ಪಾವ್ಲುಕ್ ಜಿವ್ ಕಾಡುಚೆ ಮನುನ್ ಕಟ್ಪಟ್ ಕರಿತ್ ರಾತಾನಾ ಸಗ್ಳ್ಯಾ ಶಾರಾತ್ ಗದ್ದಲ್ ಉಟ್ಲೊ ಮನ್ತಲಿ ಖಬರ್ ಜೆರುಜಲೆಮಾತ್ಲ್ಯಾ ರೊಮ್ ಸೆನಾಧಿಪತಿಕ್ ಗೊತ್ತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:31
19 ತಿಳಿವುಗಳ ಹೋಲಿಕೆ  

ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.


ಮರುದಿನ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಬಹು ಆಡಂಬರದಿಂದ ಬಂದು ಸಹಸ್ರಾಧಿಪತಿಗಳ ಮತ್ತು ಪಟ್ಟಣದ ಮುಖಂಡರ ಸಂಗಡ ಸಭಾಸ್ಥಾನದೊಳಗೆ ಸೇರಿದಾಗ ಫೆಸ್ತನು ಅಪ್ಪಣೆಕೊಡಲು ಪೌಲನನ್ನು ಕರತಂದರು.


ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾದರೂ ಅವರಿಗೆ - ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿಮ್ಮ ಕಾರ್ಯವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು.


ಇದಲ್ಲದೆ ಇವನು ದೇವಾಲಯವನ್ನು ಹೊಲೆಮಾಡುವದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.


ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ - ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಅದೆ ಎಂದು ಹೇಳಿದನು.


ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ - ಇಂಥವನನ್ನು ಭೂವಿುಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು.


ಕೆಲವು ದಿವಸಗಳ ಹಿಂದೆ ದಂಗೆ ಎಬ್ಬಿಸಿ ಆ ನಾಲ್ಕು ಸಾವಿರ ಮಂದಿ ಘಾತುಕರನ್ನು ಅಡವಿಗೆ ಕರೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೇ ಎಂದು ಕೇಳಿದನು.


ಈ ದಿನದಲ್ಲಿ ನ್ಯಾಯವಾದ ಕಾರಣವಿಲ್ಲದೆ ನೆರೆದ ಕೂಟದ ವಿಷಯದಲ್ಲಿ ಇದು ಒಂದು ದಂಗೆ ಎಂಬದಾಗಿ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಾಯಿತು. ಈ ದೊಂಬಿಯನ್ನು ಕುರಿತು ವಿಚಾರಣೆನಡೆದರೆ ನವ್ಮಿುಂದ ಉತ್ತರಕೊಡುವದಕ್ಕೆ ಆಗುವದೇ ಇಲ್ಲ ಎಂದು ಹೇಳಿದನು.


ಕೈಸರೈಯದಲ್ಲಿ ಇತಾಲ್ಯದ ಪಟಾಲಮೆನಿಸಿಕೊಳ್ಳುವ ಒಂದು ಪಟಾಲವಿುನ ಶತಾಧಿಪತಿಯಾದ ಕೊರ್ನೇಲ್ಯನೆಂಬ ಒಬ್ಬ ಮನುಷ್ಯನಿದ್ದನು.


ಆಮೇಲೆ ಆ ಸಿಪಾಯಿಗಳೂ ಸಹಸ್ರಾಧಿಪತಿಯೂ ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡುಕೊಂಡು ಕಟ್ಟಿ ಮೊದಲು ಅನ್ನನ ಬಳಿಗೆ ಕರಕೊಂಡು ಹೋದರು.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಯಾಕಂದರೆ - ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು ಎಂದು ಮಾತಾಡಿಕೊಂಡರು.


ಆದರೂ - ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು ಎಂದು ಮಾತಾಡಿಕೊಂಡರು.


ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ತೀರಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ - ಪಟ್ಟಣದಲ್ಲಿ ಇಂಥ ಗದ್ದಲವೇಕೆ ಎಂದು ವಿಚಾರಿಸುವಾಗಲೇ


ಆಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಕ್ಕೆ ತೆಗೆದುಕೊಂಡುಹೋಗಿ ಪಟಾಲಮನ್ನೆಲ್ಲಾ ಆತನ ಸುತ್ತಲು ಕೂಡಿಸಿಕೊಂಡು


ಈ ಕಾರಣದಿಂದ ಯೆಹೂದ್ಯರು ದೇವಾಲಯದಲ್ಲಿ ನನ್ನನ್ನು ಹಿಡಿದು ಕೊಲ್ಲುವದಕ್ಕೆ ಪ್ರಯತ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು