Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:32 - ಕನ್ನಡ ಸತ್ಯವೇದವು J.V. (BSI)

32 ಅವನು ತಕ್ಷಣವೇ ಸಿಪಾಯಿಗಳನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಮೇಲೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ಕ್ಷಣವೇ, ಅವನು ಕೆಲವು ಶತಾಧಿಪತಿಗಳನ್ನೂ ಸೈನಿಕರನ್ನೂ ಕರೆದುಕೊಂಡು ಜನಸಮೂಹವಿದ್ದ ಕಡೆ ಧಾವಿಸಿದನು. ಸೈನಿಕರೊಡನೆ ಬರುತ್ತಿರುವ ಸೈನ್ಯಾಧಿಪತಿಯನ್ನು ಕಂಡು ಜನರು ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ತಕ್ಷಣವೇ ಅವನು ಕೆಲವು ಸೇನಾಧಿಕಾರಿಗಳನ್ನು ಮತ್ತು ಸೈನಿಕರನ್ನು ತನ್ನೊಂದಿಗೆ ಕರೆದುಕೊಂಡು ಜನಸಮೂಹದ ಕಡೆಗೆ ಹೋದನು. ಸೇನಾಧಿಪತಿಯನ್ನು ಮತ್ತು ಅವನ ಸೈನಿಕರನ್ನು ಕಂಡ ಜನರು ಪೌಲನಿಗೆ ಹೊಡೆಯುವುದನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ಕರೆದುಕೊಂಡು ಜನಸಮೂಹದ ಬಳಿಗೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಅವನ ಸೈನಿಕರನ್ನೂ ಕಂಡಾಗ ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತಾಬೊಡ್ತೊಬ್ ತೆನಿ ಉಲ್ಲಿ ಸೆನಾಧಿಕಾರಿಯಾ, ಅನಿ ಸೈನಿಕಾಕ್ನಿ ಅಪ್ನಾ ವಾಂಗ್ಡಾ ಬಲ್ವುನ್ ಘೆವ್ನ್ ಲೊಕಾಂಚೊ ತಾಂಡೊ ಹೊತ್ತ್ಯಾಕ್ಡೆ ಗೆಲೊ ಸೆನಾಧಿಪತಿಕ್ ಅನಿ ತೆಚ್ಯಾ ಸೈನಿಕಾಕ್ನಿ ಬಗುನ್ ಲೊಕಾನಿ ಪಾವ್ಲುಕ್ ಮಾರ್‍ತಲೆ ಇಬೆ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:32
8 ತಿಳಿವುಗಳ ಹೋಲಿಕೆ  

ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಸಿ ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತಾಡಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟು ಬಿಟ್ಟರು.


ನೀವು ನನ್ನ ಜನರನ್ನು ಜಜ್ಜಿ ಬಡವರ ಮುಖವನ್ನು ಹಿಂಡುವದೇಕೆ ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.


ಇದಲ್ಲದೆ ಇವನು ದೇವಾಲಯವನ್ನು ಹೊಲೆಮಾಡುವದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.


ಅದಕ್ಕೆ ನಾನು - ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸುತ್ತಾ ಹೊಡಿಸುತ್ತಾ ಇದ್ದೆನೆಂಬದನ್ನು ಅವರೇ ತಿಳಿದಿದ್ದಾರೆ;


ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತರಲಿಲ್ಲ.


ಆಮೇಲೆ ಆ ಸಿಪಾಯಿಗಳೂ ಸಹಸ್ರಾಧಿಪತಿಯೂ ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡುಕೊಂಡು ಕಟ್ಟಿ ಮೊದಲು ಅನ್ನನ ಬಳಿಗೆ ಕರಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು