Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:3 - ಕನ್ನಡ ಸತ್ಯವೇದವು J.V. (BSI)

3 ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನಾನು ಕಿಲಿಕ್ಯದ ತಾರ್ಸದಲ್ಲಿ ಜನಿಸಿದ ಯೆಹೂದ್ಯನು, ಈ ಪಟ್ಟಣದಲ್ಲಿಯೇ ಬೆಳೆದವನು, ಗಮಲಿಯೇಲನ ಪಾದ ಸನ್ನಿಧಿಯಲ್ಲಿ ನಮ್ಮ ಪಿತೃಗಳ ನಿಯಮವನ್ನು ಸೂಕ್ಷ್ಮವಾಗಿ ಅಭ್ಯಾಸ ಮಾಡಿದೆ. ದೇವರ ವಿಷಯದಲ್ಲಿ, ಇಂದು ನೀವೆಲ್ಲರೂ ಇರುವಂತೆಯೇ ನಾನೂ ಆಸಕ್ತಿವುಳ್ಳವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:3
27 ತಿಳಿವುಗಳ ಹೋಲಿಕೆ  

ನಮ್ಮ ಧರ್ಮದಲ್ಲಿ ಬಹು ಖಂಡಿತವಾದ ಮತವನ್ನನುಸರಿಸಿ ಫರಿಸಾಯನಾಗಿ ನಡಕೊಂಡೆನೆಂದು ಪ್ರಾರಂಭದಿಂದಲೂ ಅವರು ಬಲ್ಲರು; ಸಾಕ್ಷಿಹೇಳುವದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.


ಕರ್ತನು ಅವನಿಗೆ - ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಅವನು ಪ್ರಾರ್ಥನೆ ಮಾಡುತ್ತಾನೆ.


ಆದರೆ ಎಲ್ಲಾ ಜನರಿಂದ ಮಾನಹೊಂದಿದ ನ್ಯಾಯಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟು ಸಭೆಯವರಿಗೆ -


ಅದಕ್ಕೆ ಪೌಲನು - ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.


ಅವರು ಇದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ ಹೇಳಿದ್ದು - ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೋಡುತ್ತೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದಲ್ಲಿ ಅಭಿಮಾನಿಗಳಾಗಿದ್ದಾರೆ.


ಇದನ್ನು ಬುದ್ಧಿಹೀನತೆಯಿಂದ ಹೇಳುತ್ತೇನೆ. ಅವರು ಇಬ್ರಿಯರೋ ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೋ ನಾನೂ ಇಸ್ರಾಯೇಲ್ಯನು; ಅವರು ಅಬ್ರಹಾಮನ ವಂಶದವರೋ ನಾನೂ ಅದೇ ವಂಶದವನು;


ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.


ಎಲೀಷನು ತಿರಿಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿ ಮಂಡಲಿಯವರು ತನ್ನ ಮುಂದೆ ಕೂಡಿ ಬರಲು ಅವನು ತನ್ನ ಸೇವಕನಿಗೆ - ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆಮಾಡು ಎಂದು ಆಜ್ಞಾಪಿಸಿದನು.


ಆತನು ತನ್ನ ಜನರನ್ನು ಪ್ರೀತಿಸುತ್ತಾನೆ; [ಯೆಹೋವನೇ,] ನಿನ್ನ ಭಕ್ತರೆಲ್ಲರೂ ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣ ಸನ್ನಿಧಾನದಲ್ಲಿ ಕೂತಿರುವರು; ನೀನು ಹೇಳುವ ಆಜ್ಞೆಗಳನ್ನು ಶಿರಸ್ಸಾವಹಿಸುವರು.


ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.


ಆದರೆ ಲಿಬೆರ್ತೀನರೆಂಬವರ ಸಮಾಜದವರಲ್ಲಿಯೂ ಕುರೇನ್ಯದವರ ಮತ್ತು ಅಲೆಕ್ಸಾಂದ್ರಿಯದವರ ಸಮಾಜದವರಲ್ಲಿಯೂ ಕಿಲಿಕ್ಯ ಆಸ್ಯ ಸೀಮೆಗಳಿಂದ ಬಂದವರ ಸಮಾಜದವರಲ್ಲಿಯೂ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇರಲು


(ಗಿಬ್ಯೋನ್ಯರು ಇಸ್ರಾಯೇಲ್‍ಕುಲಗಳಿಗೆ ಸೇರಿದವರಲ್ಲ; ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವದಿಲ್ಲವೆಂದು ಪ್ರಮಾಣ ಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದಕುಲಗಳ ಮೇಲೆ ತನಗಿದ್ದ ಅಭಿಮಾನದ ದೆಸೆಯಿಂದ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.)


ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.


ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.


ದೇಶಾಧಿಪತಿಯು ಆ ಕಾಗದವನ್ನು ಓದಿ ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು -


ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ - ಸಹೋದರರಾಗಿರುವ ಅಪೊಸ್ತಲರೂ ಹಿರಿಯರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;


ಆಗ ಬಹುಮಂದಿ ಕರ್ತನಿಗೆ ಸೇರಿಕೊಂಡರು. ತರುವಾಯ ಬಾರ್ನಬನು ಸೌಲನನ್ನು ಹುಡುಕುವದಕ್ಕಾಗಿ ತಾರ್ಸಕ್ಕೆ ಹೋಗಿ


ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.


ಜನರು ನಡೆದ ಸಂಗತಿಯನ್ನು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಹೆದರಿದರು.


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


ಸೌಲನು ಇನ್ನು ಕರ್ತನ ಶಿಷ್ಯರ ಮೇಲೆ ರೌದ್ರನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಶೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ -


ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡಿಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು