Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:30 - ಕನ್ನಡ ಸತ್ಯವೇದವು J.V. (BSI)

30 ಪೌಲನ ಮೇಲೆ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಮಹಾಯಾಜಕರೂ ಹಿರೀಸಭೆಯವರೆಲ್ಲರೂ ಕೂಡಿಬರುವದಕ್ಕೆ ಅಪ್ಪಣೆಕೊಟ್ಟು ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೆಹೂದ್ಯರು ಪೌಲನ ವಿರುದ್ಧ ಏಕೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದಕ್ಕೆ ನಿಜಸಂಗತಿಯನ್ನು ಕಂಡುಹಿಡಿಯಲು ಸಹಸ್ರಾಧಿಪತಿಯು ಅಪೇಕ್ಷೆಪಟ್ಟನು. ಮರುದಿನ ಪೌಲನನ್ನು ಬಿಡುಗಡೆ ಮಾಡಿ, ಮುಖ್ಯಯಾಜಕರೂ ನ್ಯಾಯಸಭೆಯೂ ಕೂಡಿಬರಬೇಕೆಂದು ಅಪ್ಪಣೆಮಾಡಿದನು. ಆಮೇಲೆ ಪೌಲನನ್ನು ತಂದು ಅವರ ಎದುರಿನಲ್ಲಿ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ದುಸ್ರೆಂದಿಸಿ ಪಾವ್ಲುಕ್ ವಿರೊಧ್ ಹೊವ್ನ್ ಜುದೆವಾಂಚ್ಯಾ ಲೊಕಾನಿ ಹಾನಲ್ಲೆ ಅಪರಾಧ್ ಕಾಯ್ ಮನುನ್ ಕಳ್ವುನ್ ಘೆವ್ಕ್ ಸೆನಾಧಿಪತಿನ್ ನಿರ್ಧಾರ್ ಕರ್‍ಲ್ಯಾನ್, ತೆಚಾ ಸಾಟ್ನಿ ತೆನಿ ಮುಖ್ಯ್ ಯಾಜಕ್ ಜುದೆವಾಂಚ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿಬಿ ಗೊಳಾ ಹೊವ್ನ್ ಯೆವ್ಕ್ ಹುಕುಮ್ ದಿಲ್ಲ್ಯಾನ್, ಸೆನಾಧಿಪತಿನ್ ಪಾವ್ಲುಚಿ ಬಾಂದಲ್ಲಿ ಸರ್ಪೊಳಿಯಾ ಕಾಡುನ್ ಟಾಕುನ್ ತೆಕಾ ಭಾಯ್ರ್ ಬಲ್ವುನ್ ಘೆವ್ನ್ ಯೆವ್ನ್ ತಾಂಡ್ಯಾಚ್ಯಾ ಇದ್ರಾಕ್ ಇಬೆ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:30
13 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.


ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -


ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.


ಆದದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಮರ್ಶೆಮಾಡಬೇಕೆಂದು ನೆವಹೇಳಿ ಅವನನ್ನು ಕೋಟೆಯಿಂದ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ ಅವನು ಹತ್ತರ ಬರುವದಕ್ಕಿಂತ ಮುಂಚೆಯೇ ಅವನನ್ನು ಕೊಲ್ಲುವದಕ್ಕೆ ಸಿದ್ಧವಾಗಿದ್ದೇವೆ ಅಂದರು.


ಈ ವಿಷಯದಲ್ಲಿ ಮಹಾಯಾಜಕನೂ ಹಿರೀಸಭೆಯವರೆಲ್ಲರೂ ಸಾಕ್ಷಿಗಳಾಗಿದ್ದಾರೆ. ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಕಾಗದಗಳನ್ನು ತೆಗೆದುಕೊಂಡು ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ದಂಡನೆಗಾಗಿ ಯೆರೂಸಲೇವಿುಗೆ ತರಬೇಕೆಂದು ಹೊರಟೆನು.


ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು.


ಅವರು ಈ ಆಜ್ಞೆಯನ್ನು ಹೊಂದಿ ಬೆಳಕುಹರಿಯುವಾಗಲೇ ದೇವಾಲಯದೊಳಗೆ ಹೋಗಿ ಉಪದೇಶ ಮಾಡಿದರು. ಇತ್ತಲಾಗಿ ಮಹಾಯಾಜಕನೂ ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ ಇಸ್ರಾಯೇಲ್ಯರ ಯಜಮಾನರ ಸಭೆಯೆಲ್ಲವನ್ನೂ ಕೂಡಿಸಿ ಅವರನ್ನು ಕರತರುವದಕ್ಕೆ ಸೆರೆಮನೆಗೆ ಕಳುಹಿಸಿದರು.


ಆತನನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.


ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ - ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.


ಅವನು - ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀನು ನಾಳೆ ಅವನನ್ನು ಹಿರೀಸಭೆಯ ಬಳಿಗೆ ಕರೆದುಕೊಂಡು ಬರಬೇಕೆಂದು ಕೇಳಿಕೊಳ್ಳುವದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು