Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:19 - ಕನ್ನಡ ಸತ್ಯವೇದವು J.V. (BSI)

19 ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ - ನೀನು ನನಗೆ ಹೇಳಬೇಕಾದದ್ದು ಏನು? ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಸಹಸ್ರಾಧಿಪತಿ ಆ ಯುವಕನ ಕೈಹಿಡಿದು, ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, “ನೀನು ನನಗೆ ಹೇಳಬೇಕೆಂದು ಇರುವ ವಿಷಯವೇನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸೈನಿಕಾಂಚ್ಯಾ ಮುಖಂಡಾನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಹಾತಿಕ್ ಧರುನ್ ಕೊನ್ ನಸಲ್ಯಾ ಜಾಗ್ಯಾಕ್ ಬಲ್ವುನ್ ನ್ಹೆವ್ನ್, ತಿಯಾ ಕಾಯ್ ಸಾಂಗಚೆ ಮನುನ್ ಹಾಸ್ ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:19
12 ತಿಳಿವುಗಳ ಹೋಲಿಕೆ  

ಯೇಸು ಅವನನ್ನು - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಲು ಆ ಕುರುಡನು - ನನಗೆ ಕಣ್ಣು ಬರುವಂತೆ ಮಾಡಬೇಕು, ಗುರುವೇ, ಅಂದನು.


ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಅವನು ಎದ್ದು ನಿಂತನು.


ಆತನು ಕುರುಡನ ಕೈ ಹಿಡುಕೊಂಡು ಊರ ಹೊರಕ್ಕೆ ಕರಕೊಂಡು ಹೋಗಿ ಅವನ ಕಣ್ಣುಗಳಲ್ಲಿ ಉಗುಳಿ ಅವನ ಮೇಲೆ ಕೈಯಿಟ್ಟು - ನಿನಗೇನಾದರೂ ಕಾಣುತ್ತದೋ? ಎಂದು ಅವನನ್ನು ಕೇಳಿದನು.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಅರಸನು ಎಸ್ತೇರ್‍ರಾಣಿಗೆ - ಯೆಹೂದ್ಯರು ಶೂಷನ್‍ಕೋಟೆಯಲ್ಲೇ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಮಂದಿ ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವದಿದ್ದರೂ ನೆರವೇರುವದು, ನೀನು ಏನು ಕೇಳಿಕೊಂಡರೂ ಕೊಡುವೆನು ಎಂದು ಹೇಳಿದನು.


ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸಪಾನಮಾಡುತ್ತಿರುವಾಗ ಎಸ್ತೇರಳಿಗೆ - ಎಸ್ತೇರ್‍ರಾಣಿಯೇ, ನಿನ್ನ ವಿಜ್ಞಾಪನೆ ಯಾವದು, ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು ಎಂದು ಹೇಳಿದನು.


ಅರಸನು ಆಕೆಗೆ ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವದು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ ಅಂದನು.


ಆಗ ಅರಸನು ನನ್ನನ್ನು - ನಿನ್ನ ಅಪೇಕ್ಷೆಯೇನು ಎಂದು ಕೇಳಿದನು. ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ ಅರಸನಿಗೆ - ರಾಜರ ಚಿತ್ತವಿರುವದಾದರೆ ಮತ್ತು


ಆಮೇಲೆ ಆ ಸಿಪಾಯಿಗಳೂ ಸಹಸ್ರಾಧಿಪತಿಯೂ ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡುಕೊಂಡು ಕಟ್ಟಿ ಮೊದಲು ಅನ್ನನ ಬಳಿಗೆ ಕರಕೊಂಡು ಹೋದರು.


ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ - ನೀನು ಹೇಳುವ ಈ ನೂತನತರವಾದ ಉಪದೇಶವನ್ನು ನಾವು ತಿಳಿಯಬಹುದೇ?


ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ - ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಅದೆಯಂತೆ ಎಂಬದಾಗಿ ಹೇಳಲು


ಅವನು - ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀನು ನಾಳೆ ಅವನನ್ನು ಹಿರೀಸಭೆಯ ಬಳಿಗೆ ಕರೆದುಕೊಂಡು ಬರಬೇಕೆಂದು ಕೇಳಿಕೊಳ್ಳುವದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು