Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:17 - ಕನ್ನಡ ಸತ್ಯವೇದವು J.V. (BSI)

17 ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹಲವಾರು ವರ್ಷಗಳಿಂದ ದೂರವಿದ್ದ ನಾನು, ಈಗ ನನ್ನ ಸ್ವದೇಶಿಯರಿಗೆ ದಾನಧರ್ಮ ತರಲೂ ಕಾಣಿಕೆಯನ್ನು ಅರ್ಪಿಸಲೂ ಜೆರುಸಲೇಮಿಗೆ ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನಾನು ಅನೇಕ ವರ್ಷಗಳಿಂದ ಜೆರುಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಿಯಾ ಲೈ ವರ್ಸಾಕ್ನಾ ಜೆರುಜಲೆಮಾತ್ ನತ್ತೊ ಮಾನಾ ಲೊಕಾಕ್ನಿ ಪೈಸೊ ಅನಿ ಆಯಾರಾ ದಿವ್ಕ್ ಮನುನ್ ಜರುಜಲೆಮಾಕ್ ಪರ್ತುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:17
14 ತಿಳಿವುಗಳ ಹೋಲಿಕೆ  

ಆದರೆ ನೀವು ನಮ್ಮಲ್ಲಿರುವ ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.


ಹೇಗಂದರೆ ನೀವು ನಡಿಸುವ ಈ ಧರ್ಮಕಾರ್ಯವು ದೇವಜನರ ಕೊರತೆಗಳನ್ನು ನೀಗುವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಗೆ ತಪ್ಪಿಸಬೇಕೆಂತಲೂ ಯೆರೂಸಲೇವಿುಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇವಿುನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ಆಗ ಪೌಲನು ಆ ಮನುಷ್ಯರನ್ನು ಕರೆದುಕೊಂಡು ಮರುದಿನ ಅವರೊಡನೆ ತನ್ನನ್ನು ಶುದ್ಧಿಮಾಡಿಕೊಂಡು ವ್ರತದ ದಿವಸಗಳು ಮುಗಿದವೆಂದು ತಿಳಿಸುವವನಾಗಿ ದೇವಾಲಯದೊಳಗೆ ಹೋದನು. ಪ್ರತಿಯೊಬ್ಬನಿಗೋಸ್ಕರ ಮಾಡಬೇಕಾದ ಅರ್ಪಣೆಯನ್ನು ಮುಂದೆ ಅರ್ಪಿಸಬೇಕಾಗಿತ್ತು.


ಆದಕಾರಣ ನಾನು ಕಣ್ಣೀರುಸುರಿಸುತ್ತಾ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿಹೇಳಿದೆನೆಂದು ನೀವು ಜ್ಞಾಪಕಮಾಡಿಕೊಂಡು ಎಚ್ಚರವಾಗಿರಿ.


ಇದಲ್ಲದೆ ತನಗೆ ಪೌಲನಿಂದ ಹಣ ಸಿಕ್ಕೀತೆಂಬ ನಿರೀಕ್ಷೆ ಅವನಿಗಿದ್ದ ಕಾರಣ ಅವನನ್ನು ಬಾರಿಬಾರಿಗೂ ಕರಿಸಿ ಅವನ ಸಂಗಡ ಸಲ್ಲಾಪಮಾಡುತ್ತಿದ್ದನು.


ಹೀಗಿರಲಾಗಿ ಈ ಧರ್ಮಕಾರ್ಯವನ್ನು ಮಾಡುವದಕ್ಕೆ ಮೊದಲು ನಿಮ್ಮನ್ನು ಪ್ರೇರೇಪಿಸಿದ ತೀತನು ತಿರಿಗಿ ನಿಮ್ಮ ಬಳಿಗೆ ಬಂದು ಅದನ್ನು ತೀರಿಸಬೇಕೆಂದು ನಾವು ಅವನನ್ನು ಕೇಳಿಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು