Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:11 - ಕನ್ನಡ ಸತ್ಯವೇದವು J.V. (BSI)

11 ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದಾದರೆ ಮರಣದಂಡನೆಯನ್ನು ಬೇಡವೆನ್ನುವದಿಲ್ಲ. ಇವರು ನನ್ನ ಮೇಲೆ ಹೊರಿಸುವ ತಪ್ಪುಗಳಲ್ಲಿ ಒಂದೂ ನಿಜವಲ್ಲದ ಮೇಲೆ ಇವರ ಮೇಲಣ ದಯೆಯಿಂದ ನನ್ನನ್ನು ಒಪ್ಪಿಸಿಕೊಡುವದಕ್ಕೆ ಒಬ್ಬರಿಗೂ ಅಧಿಕಾರವಿಲ್ಲ. ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅನಿ ಮಿಯಾ ಚುಕ್ ಕರಲ್ಲೊ ಹೊವ್ನ್ ಖಾಯ್ದ್ಯಾಂಚ್ಯಾ ಪರ್‍ಕಾರ್ ಮಾಕಾ ಮರ್‍ನಾಚಿ ಶಿಕ್ಷಾ ದಿಲ್ಯಾರ್, ಮಿಯಾ ತೆ ಒಪುನ್ ಘೆತಾ, ಖರೆ ಹೆನಿ ಸಾಂಗ್ತಲೆ ಝುಟೆ ಹೊಲ್ಯಾರ್ ಮಾಕಾ ಹೆಂಚ್ಯಾ ಹಾತಿತ್ ಒಪ್ಸುಕ್ ಕೊನಾಕ್ಡೆಬಿ ಹೊಯ್ನಾ! ಮಾಜಿ ಹಿ ವಿಶಯಾ ಸಿಸರಾಚ್ ಸಮಾ ಕರುನ್ದಿತ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:11
17 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದ್ಯರು ಅಡ್ಡಮಾತಾಡಿದ್ದರಿಂದ ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳಬೇಕಾಗಿ ಬಂತು. ನನ್ನ ಸ್ವದೇಶದವರ ಮೇಲೆ ದೋಷಾರೋಪಣೆ ಮಾಡಬೇಕೆಂಬ ಅಭಿಪ್ರಾಯದಿಂದ ಅದನ್ನು ಹೇಳಲಿಲ್ಲ.


ಅಗ್ರಿಪ್ಪನು ಫೆಸ್ತನಿಗೆ - ಈ ಮನುಷ್ಯನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.


ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂತು. ತಾನೇ ಚಕ್ರವರ್ತಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ ಇವನನ್ನು ಕಳುಹಿಸುವದಕ್ಕೆ ತೀರ್ಮಾನಿಸಿದೆನು.


ಪೌಲನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುವ ಪರ್ಯಂತರ ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾಯುವದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.


ಆ ಯೆಹೂದ್ಯರು ಕರ್ತನಾದ ಯೇಸುವನ್ನೂ ಪ್ರವಾದಿಗಳನ್ನೂ ಕೊಂದರು, ನಮ್ಮನ್ನೂ ಅಟ್ಟಿಬಿಟ್ಟರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ;


ಪೌಲನು - ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.


ಅವರು ಪೌಲನನ್ನು ಬೊಗ್ಗಿಸಿ ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು - ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ ಕೊರಡೆಗಳಿಂದ ಹೊಡಿಸುವದು ನಿಮಗೆ ನ್ಯಾಯವೋ? ಎಂದು ಕೇಳಿದನು.


ಪೌಲನು ಪ್ರತಿವಾದ ಮಾಡಬೇಕೆಂದಿದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ - ಎಲೈ ಯೆಹೂದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದೇನಾದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನದಿಂದ ಕೇಳುವದು ನ್ಯಾಯವೇ.


ಅದಕ್ಕೆ ಪೌಲನು - ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡುಹೋದರೆ ಸರಿ ಎಂದು ಹೇಳಿದನು.


ನ್ಯಾಯಸ್ಥಾನದಲ್ಲಿ ನನಗೆ ಸಹಾಯ ಉಂಟೆಂದು ಅನಾಥನ ಮೇಲೆ ಕೈಮಾಡಿದೆನೋ?


ದಾವೀದನು ತನ್ನ ಮನಸ್ಸಿನಲ್ಲಿ - ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇಬೇಕು. ಆದದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವದೇ ಉತ್ತಮ. ಆಮೇಲೆ ಸೌಲನು ಇಸ್ರಾಯೇಲ್‍ಪ್ರಾಂತಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು, ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು ಅಂದುಕೊಂಡು


ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ.


ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ - ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ ನಿನ್ನ ಸೇವಕರಿಗಾಗಲಿ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?


ಫೆಸ್ತನು ತನ್ನ ಸಭೆಯವರ ಸಂಗಡ ಆಲೋಚನೆಮಾಡಿದ ಮೇಲೆ ಪೌಲನಿಗೆ - ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಅಂದಿಯಲ್ಲಾ, ಚಕ್ರವರ್ತಿಯ ಬಳಿಗೆ ಹೋಗಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು