Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:12 - ಕನ್ನಡ ಸತ್ಯವೇದವು J.V. (BSI)

12 ಫೆಸ್ತನು ತನ್ನ ಸಭೆಯವರ ಸಂಗಡ ಆಲೋಚನೆಮಾಡಿದ ಮೇಲೆ ಪೌಲನಿಗೆ - ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಅಂದಿಯಲ್ಲಾ, ಚಕ್ರವರ್ತಿಯ ಬಳಿಗೆ ಹೋಗಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಫೆಸ್ತನು ತನ್ನ ಸಲಹೆಗಾರರೊಡನೆ ಸಮಾಲೋಚಿಸಿ, “ನೀನು ಅಪೀಲು ಮಾಡಿರುವುದು ಚಕ್ರವರ್ತಿಗೇ ಅಲ್ಲವೆ? ಚಕ್ರವರ್ತಿಯ ಬಳಿಗೇ ಹೋಗು,” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಫೆಸ್ತನು ತನ್ನ ಸಲಹೆಗಾರರೊಂದಿಗೆ ಇದರ ಬಗ್ಗೆ ಮಾತಾಡಿದನು. ಬಳಿಕ ಅವನು, “ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ ಎಂದು ನೀನು ಕೇಳಿಕೊಂಡದ್ದರಿಂದ ನಿನ್ನನ್ನು ಸೀಸರನ ಬಳಿಗೇ ಕಳುಹಿಸಿಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಫೆಸ್ತನು ತನ್ನ ನ್ಯಾಯಸಭೆಯೊಂದಿಗೆ ಸಮಾಲೋಚನೆ ಮಾಡಿ, “ನೀನು ಕೈಸರನಿಗೆ ಮನವಿ ಮಾಡಿಕೊಂಡಿರುವೆ, ಕೈಸರನ ಬಳಿಗೇ ಹೋಗು!” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಫೆಸ್ತಾನ್ ಅಪ್ನಾಕ್ ಸಲಹಾ ದಿತಲ್ಯಾಂಚ್ಯಾಕ್ನಾ ಹೆಚ್ಯಾ ವಿಶಯಾತ್ ಬೊಲ್ಲ್ಯಾನ್, ಅನಿ ತಿಯಾ ಮಾಜಿ ವಿಶಯಾತ್ ಸಿಸರಾಚ್ ಸಮಾ ಕರುಂದಿತ್ ಮನುನ್ ಸಾಂಗಲ್ಲ್ಯಾ ಸಾಟ್ನಿ ತುಕಾ ತೆಜ್ಯಾಕ್ಡೆಚ್ ಧಾಡುನ್ ದಿತಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:12
17 ತಿಳಿವುಗಳ ಹೋಲಿಕೆ  

ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ನಾವು ರೋಮಾಪುರಕ್ಕೆ ಬಂದ ಮೇಲೆ ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.


ಅಗ್ರಿಪ್ಪನು ಫೆಸ್ತನಿಗೆ - ಈ ಮನುಷ್ಯನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆಂದು ಹೇಳದೆ ಹೋಗಿದ್ದರೆ ಇವನನ್ನು ಬಿಡಬಹುದಾಗಿತ್ತು ಎಂದು ಹೇಳಿದನು.


ಪೌಲನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುವ ಪರ್ಯಂತರ ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾಯುವದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.


ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಹೀಗಿರಲಾಗಿ ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.


ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದಾದರೆ ಮರಣದಂಡನೆಯನ್ನು ಬೇಡವೆನ್ನುವದಿಲ್ಲ. ಇವರು ನನ್ನ ಮೇಲೆ ಹೊರಿಸುವ ತಪ್ಪುಗಳಲ್ಲಿ ಒಂದೂ ನಿಜವಲ್ಲದ ಮೇಲೆ ಇವರ ಮೇಲಣ ದಯೆಯಿಂದ ನನ್ನನ್ನು ಒಪ್ಪಿಸಿಕೊಡುವದಕ್ಕೆ ಒಬ್ಬರಿಗೂ ಅಧಿಕಾರವಿಲ್ಲ. ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎನ್ನಲು


ಕೆಲವು ದಿವಸಗಳು ಗತಿಸಿದ ನಂತರ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಫೆಸ್ತನ ದರ್ಶನಮಾಡಿಕೊಳ್ಳುವದಕ್ಕೆ ಕೈಸರೈಯಕ್ಕೆ ಬಂದರು.


ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಚಕ್ರವರ್ತಿಯ ಪಟಾಲವಿುಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು