Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:9 - ಕನ್ನಡ ಸತ್ಯವೇದವು J.V. (BSI)

9 ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವಸಲುವಾಗಿ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಫೆಸ್ತನು ಯೆಹೂದ್ಯರ ಮೆಚ್ಚಿಕೆ ಗಳಿಸಿಕೊಳ್ಳಬೇಕೆಂದಿದ್ದನು. ಆದ್ದರಿಂದ ಅವನು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಯಸುವೆಯಾ? ಈ ದೋಷಾರೋಪಣೆಗಳ ಕುರಿತು ನಾನು ಅಲ್ಲಿಯೇ ನಿನಗೆ ತೀರ್ಪು ಮಾಡಬೇಕೆಂದು ಅಪೇಕ್ಷಿಸುವಿಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಫೆಸ್ತಾನ್ ಜುದೆವಾಂಚ್ಯಾಕ್ನಾ ಬರೊ ಮನ್ವುನ್ ಘೆವ್ಚೆ ಮನುನ್ ಹೊತ್ತೊ, ತಸೆ ಹೊವ್ನ್ ತೆನಿ ಪಾವ್ಲುಕ್, ತಿಯಾ ಜೆರುಜಲೆಮಾಕ್ ಜಾತೆಯ್ ಕಾಯ್, ಹೆನಿ ಸಾಂಗ್ತಲ್ಯಾ ಸಂಗ್ತಿಯಾಕ್ನಿ ಮಿಯಾ ತುಕಾ ಥೈಚ್ ಇಚ್ಯಾರ್ನಿ ಕರುಚೆ ಮನ್ತಲಿ ತುಜಿ ಇಚ್ಚ್ಯಾ ಕಾಯ್? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:9
5 ತಿಳಿವುಗಳ ಹೋಲಿಕೆ  

ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.


ಇಂಥ ಕಾರ್ಯಗಳನ್ನು ಹೇಗೆ ವಿಚಾರಣೆಮಾಡಬೇಕೋ ನನಗೆ ತೋರದೆ - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಇವುಗಳ ವಿಷಯವಾಗಿ ವಿಚಾರಣೆಹೊಂದುವದಕ್ಕೆ ನಿನಗೆ ಮನಸ್ಸುಂಟೋ? ಎಂದು ನಾನು ಕೇಳಲು


ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ನೋಡಿ ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಹಿಡಿಸಿದನು. ಆ ಕಾಲದಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.


ಅದಕ್ಕೆ ಪಿಲಾತನು ಜನರ ಮನಸ್ಸನ್ನು ಸಮಾಧಾನಪಡಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿದನು.


ನೀನು ದಯಮಾಡಿ ಅವನನ್ನು ಯೆರೂಸಲೇವಿುಗೆ ಕರತರಿಸಬೇಕೆಂದು ಪೌಲನ ಕೇಡಿಗಾಗಿ ಬಿನ್ನಹವನ್ನು ಮಾಡಿದರು. ಮಾರ್ಗದಲ್ಲಿ ಅವನನ್ನು ಕೊಲ್ಲುವದಕ್ಕಾಗಿ ಹೊಂಚುಹಾಕಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು