Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:10 - ಕನ್ನಡ ಸತ್ಯವೇದವು J.V. (BSI)

10 ಯೆರೂಸಲೇವಿುನಲ್ಲಿ ಹಾಗೆಯೇ ನಡಿಸಿದೆನು. ಮಹಾಯಾಜಕರಿಂದ ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇಡಿಸಿ ಅವರಿಗೆ ಮರಣದ ತೀರ್ಪಾದಾಗ ನನ್ನ ಸಮ್ಮತಿಯನ್ನು ಸೂಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಜೆರುಸಲೇಮಿನಲ್ಲೇ ಈ ಕಾರ್ಯವನ್ನು ಆರಂಭಿಸಿದೆ . ಮುಖ್ಯ ಯಾಜಕರಿಂದ ಅಧಿಕಾರ ಪಡೆದು ದೇವಜನರಲ್ಲಿ ಅನೇಕರನ್ನು ನಾನು ಸೆರೆಮನೆಗೆ ತಳ್ಳಿದೆ. ಅವರಿಗೆ ಮರಣದಂಡನೆ ವಿಧಿಸಿದಾಗ ನಾನೂ ಅದನ್ನು ಅನುಮೋದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆರುಜಲೆಮಾತ್ ದೆವಾಚ್ಯಾ ಲೊಕಾಕ್ನಿ ವಿರೊಧ್ ಹೊವ್ನ್ ಲೈ ಕಾಮಾ ಕರಲ್ಲೊ ಹ್ಯಾ ದೆವಾಚ್ಯಾ ಲೊಕಾಕ್ನಿ ಬಂದಿಖಾನ್ಯಾತ್ ಘಾಲುಕ್ ಮುಖ್ಯ್ ಯಾಜಕಾನಿ ಮಾಕಾ ಅಧಿಕಾರ್ ದಿಲ್ಯಾನಿ, ಜೆಜುಚ್ಯಾ ಸಿಸಾಕ್ನಿ ಜಿವಾನಿ ಮಾರಲ್ಲ್ಯಾ ತನ್ನಾ ಮಿಯಾ ತೆಕಾ ಒಪ್ಗಿ ದಿಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:10
17 ತಿಳಿವುಗಳ ಹೋಲಿಕೆ  

ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.


ಕೇಳಿದವರೆಲ್ಲರು ಬೆರಗಾಗಿ - ಈ ಹೆಸರು ಹೇಳುವವರನ್ನು ಯೆರೂಸಲೇವಿುನಲ್ಲಿ ಹಾಳುಮಾಡಿದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮಹಾಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದೇ ಇಲ್ಲಿಗೆ ಬಂದನಲ್ಲವೇ ಎಂದು ಮಾತಾಡಿಕೊಂಡರು.


ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.


ಅವನು ಯೆರೂಸಲೇವಿುಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನ ಮಾಡಿದಾಗ ಎಲ್ಲರು ಅವನನ್ನು ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.


ಇದನ್ನು ಹೇಳಿ ನಿದ್ರೆಹೋದನು. ಸೌಲನು ಅವನ ಕೊಲೆಗೆ ಸಮ್ಮತಿಸುವವನಾಗಿದ್ದನು. ಆ ದಿವಸದಲ್ಲಿ ಯೆರೂಸಲೇವಿುನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರು ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.


ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.


ಆ ಸ್ತ್ರೀಯು ದೇವಜನರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿ ಕೊಟ್ಟು ಹತರಾದವರ ರಕ್ತವನ್ನೂ ಕುಡಿದು ಮತ್ತಳಾಗಿರುವದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ಹಿಂದೆ ನಾನು ಯೆಹೂದ್ಯಮತದಲ್ಲಿದ್ದಾಗ ನನ್ನ ನಡತೆ ಎಂಥದೆಂದು ನೀವು ಕೇಳಿದ್ದೀರಷ್ಟೆ. ನಾನು ದೇವರ ಸಭೆಯನ್ನು ಅತ್ಯಂತವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.


ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸಿಯಾಗಿದ್ದ ದೇವಜನರ ಬಳಿಗೂ ಬಂದನು..


ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ - ಇವರೇ ಶ್ರೆಷ್ಠರು, ಇವರೇ ನನಗೆ ಇಷ್ಟರಾದವರು ಎಂತಲೂ ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು