Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:11 - ಕನ್ನಡ ಸತ್ಯವೇದವು J.V. (BSI)

11 ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹರ್ ಎಕ್ ಸಿನಾಗೊತ್ನಿ ಮಿಯಾ ತೆಂಕಾ ಶಿಕ್ಷಾ ದಿಲಾ ಜೆಜುಚ್ಯಾ ವರ್‍ತಿ ವಿರೊಧ್ ಹೊವ್ನ್ ತೆಂಚ್ಯಾ ತೊಂಡಾನಿ ಸಾಂಗುಕ್ ಮಿಯಾ ಕಸರತ್ ಕರ್‍ಲೊ ತ್ಯಾ ದೆವಾಚ್ಯಾ ಲೊಕಾಚ್ಯಾ ವರ್‍ತಿ ಲೈ ರಾಗ್ ಹೊವ್ನ್ ತೆಂಕಾ ಹುಡ್ಕುನ್ ತರಾಸ್ ದಿವ್ಕ್ ದುಸ್ರ್ಯಾ ದೆಶಾತ್ ಅನಿ ಶಾರಾಕ್ನಿ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:11
17 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು - ಕರ್ತನೇ, ಎಲ್ಲಾ ಸಭಾಮಂದಿರಗಳಲ್ಲಿ ನಿನ್ನ ಮೇಲೆ ನಂಬಿಕೆಯಿಟ್ಟವರನ್ನು ನಾನು ಸೆರೆಮನೆಯಲ್ಲಿ ಹಾಕಿಸುತ್ತಾ ಹೊಡಿಸುತ್ತಾ ಇದ್ದೆನೆಂಬದನ್ನು ಅವರೇ ತಿಳಿದಿದ್ದಾರೆ;


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಈ ವಿಷಯದಲ್ಲಿ ಮಹಾಯಾಜಕನೂ ಹಿರೀಸಭೆಯವರೆಲ್ಲರೂ ಸಾಕ್ಷಿಗಳಾಗಿದ್ದಾರೆ. ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಕಾಗದಗಳನ್ನು ತೆಗೆದುಕೊಂಡು ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ದಂಡನೆಗಾಗಿ ಯೆರೂಸಲೇವಿುಗೆ ತರಬೇಕೆಂದು ಹೊರಟೆನು.


ಸೌಲನು ಇನ್ನು ಕರ್ತನ ಶಿಷ್ಯರ ಮೇಲೆ ರೌದ್ರನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಶೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ -


ಆದರೆ ಅವನ ಅಕ್ರಮಕ್ಕೆ ಖಂಡನೆಯಾಯಿತು; ಮೂಕ ಪಶುವು ಮನುಷ್ಯಸ್ವರದಿಂದ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.


ನೀವು ಕರೆಸಿಕೊಳ್ಳುವ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?


ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.


ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.


ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.


ಇದಲ್ಲದೆ ಅವರು - ಇವನಿಗೆ ದೆವ್ವ ಹಿಡಿದದೆ ಎಂದು ಹೇಳಿದ್ದರಿಂದ ಆತನು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಎಷ್ಟು ದೂಷಿಸಿದಾಗ್ಯೂ ಅವರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಉಂಟಾಗುವದು, ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದನು; ಅವನು ಶಾಶ್ವತ ಪಾಪದೊಳಗೆ ಸೇರಿದವನಾದನು ಎಂದು ಹೇಳಿದನು.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು