Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:29 - ಕನ್ನಡ ಸತ್ಯವೇದವು J.V. (BSI)

29 ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಪಾವ್ಲುನ್, “ಸರಳ್ ಕಿ ಕಸ್ಟ್ ಕಿ ತೆ ಮಾಕಾ ಮುಖ್ಯ್ ನ್ಹಯ್ ತಿಯಾ ಎಕುಚ್ ನ್ಹಯ್, ಆಜ್ ಮಿಯಾ ಸಾಂಗಲ್ಲೆ ಆಯ್ಕುನ್ ಘೆಟಲ್ಲೊ ಹರಿಎಕ್ಲೊ ರಾಕನ್ ಹೊವ್ಚೆ ಅನಿ ಮಾಜ್ಯಾ ಸಾರ್ಕೆ ಹೊವ್ಚೆ ಮನುನ್ ಮಿಯಾ ದೆವಾಚ್ಯಾ ಜಗ್ಗೊಳ್ ಮಾಗ್ನಿ ಕರ್‍ತಾ, ಹೊಲ್ಯಾರ್ ಹ್ಯೊ ಅನ್ಮಾನ್ ತುಕಾ ನಕ್ಕೊ!” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:29
18 ತಿಳಿವುಗಳ ಹೋಲಿಕೆ  

ಆ ಸತ್ಯಾರ್ಥದ ನಿವಿುತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ, ಅದರ ವಿಷಯದಲ್ಲಿ ಧೈರ್ಯವಾಗಿ ಮಾತಾಡುವ ಹಂಗಿನಲ್ಲಿದ್ದೇನೆ; ಹಾಗೆಯೇ ನಾನು ಮಾತಾಡಬೇಕೆಂದು ನನಗೋಸ್ಕರ ಬೇಡಿಕೊಳ್ಳಿರಿ.


ನಾವು ಆತನನ್ನು ಪ್ರಸಿದ್ಧಿಪಡಿಸುವವರಾಗಿ ಸಕಲರಿಗೂ ಬುದ್ಧಿಹೇಳುತ್ತಾ ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವದಕ್ಕೆ ಪ್ರಯತ್ನಿಸುತ್ತಿದ್ದೇವೆ.


ಸಹೋದರರೇ, ಇಸ್ರಾಯೇಲ್ಯರು ರಕ್ಷಣೆಹೊಂದಬೇಕೆಂಬದೇ ನನ್ನ ಮನೋಭಿಲಾಷೆಯೂ ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.


ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -


ನಾನು ನನ್ನನ್ನು ಹೊಗಳಿಕೊಳ್ಳುವದರಲ್ಲಿ ಸ್ವಲ್ಪ ಬುದ್ಧಿಹೀನತೆಯಿಂದ ಮಾತಾಡುತ್ತೇನೆ; ನೀವು ಅದನ್ನು ಸಹಿಸಿಕೊಳ್ಳುತ್ತೀರೇನೋ. ನನ್ನನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂದು ನನ್ನ ಇಷ್ಟ; ಆದರೆ ಒಬ್ಬನು ಒಂದು ವಿಧವಾಗಿ ಮತ್ತೊಬ್ಬನು ಇನ್ನೊಂದು ವಿಧವಾಗಿ ದೇವರಿಂದ ವರವನ್ನು ಹೊಂದಿಕೊಂಡಿದ್ದಾರೆ.


ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಮ್ಮ ಸಹಾಯವಿಲ್ಲದೆ ಅರಸರಾದಿರಿ. ನೀವು ನಿಜವಾಗಿ ಅರಸರಾಗಿದ್ದರೆ ನನಗೆ ಎಷ್ಟೋ ಆನಂದವಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಅರಸರಾಗಿರುತ್ತಿದ್ದೆವು.


ಅವರು ಅನೇಕ ದಿವಸ ಅಲ್ಲಿ ನಿಂತಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ - ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.


ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿವಸದ ಹಿಂದಿನ ರಾತ್ರಿಯಲ್ಲಿ ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ ಇಬ್ಬರು ಸಿಪಾಯಿಗಳ ನಡುವೆ ನಿದ್ದೆ ಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.


ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ತಕ್ಕೊಳ್ಳುವದಿಲ್ಲ; ಆದರೂ ನಿಮಗೆ ರಕ್ಷಣೆ ಆಗಬೇಕೆಂದು ಇದನ್ನು ಹೇಳಿದ್ದೇನೆ.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


ಆಕೆಯು ಒಂದು ದಿವಸ ತನ್ನ ಯಜಮಾನಿಗೆ - ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇರುತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅವನು ಇವನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು ಎಂದು ಹೇಳಿದಳು.


ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.


ಅದಕ್ಕೆ ಮೋಶೆ - ನನ್ನ ಗೌರವವನ್ನು ಕಾಪಾಡಬೇಕೆಂದಿದ್ದೀಯೇ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮೀಯವರಗಳನ್ನು ಹೊಂದಿದವರೂ ಪ್ರವಾದಿಸುವರೂ ಆದರೆ ಎಷ್ಟೋ ಒಳ್ಳೇದು ಅಂದನು.


ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.


ಯೆರೆಮೀಯನು - ನಿನ್ನನ್ನು ಒಪ್ಪಿಸರು; ಜೀಯಾ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಕೊಳ್ಳು; ಕೈಕೊಂಡರೆ ಪ್ರಾಣವುಳಿಯುವದು, ಸುಖವೂ ಆಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು