Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:10 - ಕನ್ನಡ ಸತ್ಯವೇದವು J.V. (BSI)

10 ಪೌಲನು - ಜನರೇ, ಈ ಪ್ರಯಾಣದಿಂದ ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೂ ಕಷ್ಟವೂ ಬಹು ನಷ್ಟವೂ ಸಂಭವಿಸುವದೆಂದು ನನಗೆ ತೋರುತ್ತದೆ ಎಂದು ಅವರನ್ನು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಜನರೇ, ಈ ಪ್ರಯಾಣದಿಂದ ಸರಕಿಗೂ, ಹಡಗಿಗೆ ಮಾತ್ರವಲ್ಲದೆ, ನಮ್ಮ ಪ್ರಾಣಗಳಿಗೂ ಕಷ್ಟವೂ, ಬಹು ನಷ್ಟವೂ ಸಂಭವಿಸುವುದೆಂದು ನನಗೆ ತೋರುತ್ತಿದೆ” ಎಂದು ಅವರನ್ನು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಪೌಲನು, “ಮಿತ್ರರೇ, ಇಲ್ಲಿಂದ ಮುಂದಕ್ಕೆ ಪ್ರಯಾಣ ಅಪಾಯಕರವಾಗಿರುವಂತೆ ತೋರುತ್ತದೆ. ಹಡಗು ಮತ್ತು ಅದರಲ್ಲಿರುವ ಸರಕುಸಾಮಗ್ರಿಗಳಿಗೆ ಮಾತ್ರವಲ್ಲ, ನಮ್ಮ ಪ್ರಾಣಕ್ಕೂ ಕಷ್ಟನಷ್ಟ ಸಂಭವಿಸಲಿದೆ,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಪೌಲನು ಅವರಿಗೆ, “ಜನರೇ, ಈ ಪ್ರಯಾಣದಲ್ಲಿ ನಮಗೆ ಬಹಳ ತೊಂದರೆಯಿದೆ ಎಂದು ನನಗೆ ತೋರುತ್ತದೆ. ಹಡಗು ಮತ್ತು ಹಡಗಿನಲ್ಲಿರುವ ವಸ್ತುಗಳು ನಾಶವಾಗುತ್ತವೆ. ನಮ್ಮ ಪ್ರಾಣಗಳು ಸಹ ನಷ್ಟವಾಗಬಹುದು!” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಸಹೋದರರೇ, ನಮ್ಮ ಸಮುದ್ರ ಪ್ರಯಾಣವು ಅಪಾಯಕಾರಿಯಾಗಿರುವಂತೆ ತೋರುತ್ತದೆ. ಇದರಿಂದ ನಮ್ಮ ನೌಕೆಗೂ ಸರಕಿಗೂ ಅಷ್ಟೇ ಅಲ್ಲ, ನಮ್ಮ ಪ್ರಾಣಗಳಿಗೂ ದೊಡ್ಡ ಹಾನಿ ಬರುವ ಸಂಭವವಿದೆ,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಸೆ ಹೊವ್ನ್ ಪಾವ್ಲುನ್ ತೆಂಕಾ, ಅಮ್ಕಾ ಜಾತಾನಾ ಲೈ ತರಾಸ್ ಹೊತಲೆ ರ್‍ಹಾವ್ಕ್ ಫಿರೆ ಢೊನಿಯಾ, ಅನಿ ತ್ಯಾತುರ್ ಹೊತ್ತಿ ಸಾಮಾನಾ ಸಗ್ಳಿ ನಾಸ್ ಹೊವ್ನ್ ಜಾತಾತ್ ಅಮ್ಚಿ ಜಿವಾಬಿ ನಾಸ್ ಹೊತಾತ್ ಮನುನ್ ಸಾಂಗುಕ್ ಹೊಯ್ನಾ! ಮನುನ್ ಹುಶ್ಯಾರ್ಕಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:10
12 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂತಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದುಬರಲಿ ಎಂದು ಈ ರಹಸ್ಯವು ನನಗೆ ವ್ಯಕ್ತವಾಗಿದೆ.


ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.


ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣ ರಕ್ಷಣೆಗೆ ಅವಶ್ಯ. ನಿಮ್ಮಲ್ಲಿ ಯಾರ ತಲೆಯಿಂದಾದರೂ ಒಂದು ಕೂದಲೂ ಉದುರಿಹೋಗುವದಿಲ್ಲವೆಂದು ಹೇಳಿ


ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಹೇಗೆ?


ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ - ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವದಕ್ಕಾಗುವದಿಲ್ಲವೆಂದು ಹೇಳಿದನು.


ಮುಂದೆ ಕುಪ್ರದ್ವೀಪವನ್ನು ಕಂಡು ಅದನ್ನು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್‍ಪಟ್ಟಣಕ್ಕೆ ಬಂದು ಇಳಿದೆವು. ಯಾಕಂದರೆ ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು