Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:13 - ಕನ್ನಡ ಸತ್ಯವೇದವು J.V. (BSI)

13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರ ಎತ್ತಿ ಕ್ರೇತದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಕ್ಷಿಣದಿಂದ ತೆಳುಗಾಳಿ ಬೀಸಲಾರಂಭಿಸಿತು. ಪ್ರಯಾಣಿಕರು ತಮ್ಮ ಉದ್ದೇಶ ಕೈಗೂಡಿತೆಂದು ಭಾವಿಸಿದರು. ಅವರು ಹಡಗಿನ ಲಂಗರುಗಳನ್ನು ಎತ್ತಿ, ಕ್ರೇಟ್ ದ್ವೀಪವನ್ನು ಅನುಸರಿಸುತ್ತಾ, ತೀರದ ಮಗ್ಗುಲಲ್ಲೇ ಪ್ರಯಾಣ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ಅಮಿ ಜಾವ್ಕ್ ಆಸ್ಯಾ ಕರಲ್ಯಾ ದಿಕ್ಕಾಕ್ನಾ ಬರೊ ವಾರೊ ಯೆವ್ಕ್ ಲಾಗ್ಲೊ, ತನ್ನಾ ಢೊನಿತ್ನಿ ಸಗ್ಳ್ಯಿಲೊಕಾಬಿ, ಆಮ್ಕಾ ಪಾಜೆ ಹೊಲ್ಲೊ ಅಸ್ಲೊಚ್ ವಾರೊ ಅತ್ತಾ ತೊ ಅಮ್ಕಾ ಗಾವ್ಲೊ! ಮನುನ್ ಕಳ್ವುನ್ ಘೆವ್ಕ್ ಲಾಗ್ಲೆ, ಅನಿ ತೆನಿ ಢೊನಾಕ್ ಭಾಂದುನ್ ಥವಲ್ಲೊ ಗೊಕ್ಕೊ ವೈರ್ ಪರ್ತುನ್ ಘೆಟ್ಲ್ಯಾನಿ, ಅಮಿ ಕ್ರೆಟ್ ಮನ್ತಲ್ಯಾ ದ್ವಿಪಾಚ್ಯಾ ಕರಾವಳಿಕ್ನಾ ಗೆಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:13
10 ತಿಳಿವುಗಳ ಹೋಲಿಕೆ  

ದಕ್ಷಿಣ ದಿಕ್ಕಿನ ಗಾಳಿ ಬೀಸಲಾಗಿ ಸೆಕೆ ಹುಟ್ಟುವದು ಅನ್ನುತ್ತೀರಿ; ಅದೂ ಆಗುತ್ತದೆ.


ಬಡಗಣ ಗಾಳಿಯೇ ಬೀಸು, ತೆಂಕಣ ಗಾಳಿಯೇ ಬಾ! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನುಂಟುಮಾಡಿ ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು


ಭೂವಿುಯು ತೆಂಕಣಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ ಉಡುಪಿನ ಬಿಸಿಯನ್ನು ಅನುಭವಿಸಿದವನೇ,


ಅರಬೀದೇಶದವರೂ ಆಗಿರುವ ನಾವು ನಮ್ಮ ನಮ್ಮ ಭಾಷೆಗಳಲ್ಲಿ ಇವರು ದೇವರ ಮಹತ್ತುಗಳ ವಿಷಯವಾಗಿ ಹೇಳುವದನ್ನು ಕೇಳುತ್ತೇವೆ ಅಂದುಕೊಂಡರು.


ಪ್ರಯಾಸದಿಂದ ಆ ದ್ವೀಪದ ಕರಾವಳಿಯನ್ನು ಹಿಡಿದು ಹೋಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.


ಆ ರೇವು ಹಿಮಕಾಲವನ್ನು ಕಳೆಯುವದಕ್ಕೆ ಅನುಕೂಲವಲ್ಲದ್ದರಿಂದ ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ ಅಲ್ಲೇ ಆ ಹಿಮಕಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ಆಲೋಚನೆ ಹೇಳಿದರು. ಫೊಯಿನಿಕ್ಸವು ಕ್ರೇತದ್ವೀಪದ ಒಂದು ರೇವು; ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು - ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.


ನೀನು ಕ್ರೇತದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ ಪಟ್ಟಣಪಟ್ಟಣಗಳಲ್ಲೂ ಸಭೆಯ ಹಿರಿಯರನ್ನು ನೇವಿುಸಬೇಕೆಂದು ನಾನು ನಿನಗೆ ಅಪ್ಪಣೆ ಕೊಟ್ಟು ನಿನ್ನನ್ನು ಅಲ್ಲೇ ಬಿಟ್ಟು ಬಂದೆನಲ್ಲಾ.


ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಸೋಮಾರಿಗಳಾದ ಹೊಟ್ಟೇಬಾಕರೂ ಆಗಿದ್ದಾರೆಂದು ಅವರಲ್ಲಿಯೇ ಹುಟ್ಟಿದ ಒಬ್ಬ ಪ್ರವಾದಿಯು ಹೇಳಿದನು. ಈ ಸಾಕ್ಷಿಯು ನಿಜವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು