Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:10 - ಕನ್ನಡ ಸತ್ಯವೇದವು J.V. (BSI)

10 ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ ನಾವು ಬಿಟ್ಟು ಹೊರಟಾಗ ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರೆಲ್ಲರು ನಮ್ಮನ್ನು ಹಲವಾರು ವಿಧದಲ್ಲಿ ಬಹುಮಾನಿಸಿದರು; ಮಾತ್ರವಲ್ಲ, ನಾವು ಅಲ್ಲಿಂದ ನೌಕಾಯಾನವನ್ನು ಮುಂದುವರಿಸಿದಾಗ, ನಮಗೆ ಅವಶ್ಯವಾದುದೆಲ್ಲವನ್ನು ತಂದು ಹಡಗಿನಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತ್ಯಾ ದ್ವಿಪಾತ್ಲ್ಯಾ ಲೊಕಾನಿ ಅಮ್ಕಾ ಭೊಮಾನಾ ದಿಲ್ಯಾನಿ, ಅಮಿ ಥೈತ್ನಾ ಜಾವ್ಕ್ ತಯಾರ್ ಹೊಲ್ಲ್ಯಾ ತನ್ನಾ ತೆನಿ ಅಮ್ಕಾ ಪಾಜೆ ಹೊಲ್ಲಿ ಸಗ್ಳ್ಯಿ ಸಾಮಾನಾ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:10
15 ತಿಳಿವುಗಳ ಹೋಲಿಕೆ  

ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮಗೆ ಗೌರವವನ್ನು ಕೊಡಬೇಕೆಂದು ಹೇಳಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ ಇತರರಿಂದಾಗಲಿ ಹೊಂದಲಪೇಕ್ಷಿಸುವವರಾಗಿಲ್ಲ.


ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿಯೊಂದು ಕೊರತೆಯನ್ನು ನೀಗಿಸುವನು.


[ಎಜ್ರನು ಹೇಳಿದ್ದು - ] ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯವನ್ನು ಶೋಭಿಸುವ ಸ್ಥಿತಿಗೆ ತರುವದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸು ಮಾಡಿದ್ದಾನೆ;


ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು - ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ ಇಲ್ಲವೋ ಎಂಬದನ್ನು ವಿಚಾರಿಸುವದಕ್ಕಾಗಿ ನನ್ನನ್ನು ನಿನ್ನ ಹತ್ತಿರ ಕಳುಹಿಸಿದ್ದಾನೆ ಎಂದು ಹೇಳಿದನು.


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ಇದಾದ ಮೇಲೆ ಆ ದ್ವೀಪದಲ್ಲಿದ್ದ ವಿುಕ್ಕಾದ ರೋಗಿಗಳು ಅವನ ಬಳಿಗೆ ಬಂದು ಸ್ವಸ್ಥರಾದರು.


ಮೂರು ತಿಂಗಳಾದ ಮೇಲೆ ಅಲೆಕ್ಸಾಂದ್ರಿಯದಿಂದ ಬಂದು ಆ ದ್ವೀಪದಲ್ಲಿ ಹಿಮಕಾಲವನ್ನು ಕಳೆದಿದ್ದ ಒಂದು ಹಡಗನ್ನು ಹತ್ತಿ ಹೊರಟೆವು. ಆ ಹಡಗಿಗೆ ಅಶ್ವಿನೀದೇವತೆಗಳೆಂಬ ಚಿಹ್ನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು