Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:14 - ಕನ್ನಡ ಸತ್ಯವೇದವು J.V. (BSI)

14 ಅಲ್ಲಿ ಕ್ರೈಸ್ತ ಸಹೋದರರು ಸಿಕ್ಕಿದರು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿವಸ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಲ್ಲಿ ಕೆಲವು ಕ್ರೈಸ್ತಭಕ್ತಾದಿಗಳನ್ನು ಕಂಡೆವು. ತಮ್ಮೊಡನೆ ಒಂದು ವಾರ ತಂಗಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ತರುವಾಯ ನಾವು ರೋಮಿಗೆ ಬಂದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಲ್ಲಿ ಕೆಲವು ಮಂದಿ ವಿಶ್ವಾಸಿಗಳನ್ನು ಕಂಡೆವು. ತಮ್ಮೊಂದಿಗೆ ಒಂದು ವಾರವಾದರೂ ಇರಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ಕೊನೆಗೆ ನಾವು ರೋಮಿಗೆ ಹೊರಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಲ್ಲಿ ಕೆಲವು ಸಹೋದರರು ನಮ್ಮನ್ನು ಕಂಡು ಒಂದು ವಾರ ತಮ್ಮೊಂದಿಗೆ ಕಳೆಯಬೇಕೆಂದು ಆಮಂತ್ರಿಸಿದರು. ಕೊನೆಗೆ ನಾವು ರೋಮ್ ಸೇರಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಥೈ ಥೊಡಿ ದೆವಾಚ್ಯಾ ತಾಂಡ್ಯಾಚಿ ಲೊಕಾ ಹೊತ್ತಿ, ತೆನಿ ಅಪ್ನಾಂಚ್ಯಾ ವಾಂಗ್ಡಾ ಎಕ್‍ ವಾರ್ ತರಿಬಿ ರಾವ್ಚೆ ಮನುನ್ ಸಾಂಗ್ಲ್ಯಾನಿ, ಆಕ್ರಿಕ್ ಅಮಿ ರೊಮ್ ಶಾರಾಕ್ ಯೆಲಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:14
17 ತಿಳಿವುಗಳ ಹೋಲಿಕೆ  

ಅಲ್ಲಿ ಶಿಷ್ಯರನ್ನು ಹುಡುಕಿ ಕಂಡು ಏಳು ದಿವಸ ನಿಂತೆವು. ಅವರು ಆತ್ಮನ ಪ್ರೇರಣೆಯಿಂದ ಪೌಲನಿಗೆ - ನೀನು ಯೆರೂಸಲೇವಿುಗೆ ಕಾಲಿಡಬೇಡವೆಂದು ಹೇಳಿದರು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿವಸಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸದಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿವಸಗಳಿದ್ದೆವು.


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ಏಳುದಿನಗಳ ನಂತರ ನಾನು ಭೂವಿುಯ ಮೇಲೆ ನಾಲ್ವತ್ತು ದಿವಸ ಹಗಲಿರುಳು ಮಳೆಯನ್ನು ಸುರಿಸಿ ನನ್ನಿಂದಾದ ಜೀವರಾಶಿಗಳನ್ನೆಲ್ಲಾ ಭೂವಿುಯ ಮೇಲಿನಿಂದ ಅಳಿಸಿಬಿಡುತ್ತೇನೆ ಎಂದು ಹೇಳಿದನು.


ಇದರ ದೆಸೆಯಿಂದ ಆ ಶಿಷ್ಯನು ಸಾಯುವದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಆತನು ಹೇಳಿದನು.


ನೀವು ಯಾವದೊಂದು ಊರಿಗೆ ಅಥವಾ ಹಳ್ಳಿಗೆ ಸೇರಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅವರಲ್ಲೇ ಇರ್ರಿ.


ನಿನ್ನ ನೇಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.


ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.


ಅಲ್ಲಿಂದ ನಾವು ಸುತ್ತಿಕೊಂಡು ಹೋಗಿ ರೇಗಿಯಕ್ಕೆ ಸೇರಿದೆವು. ಒಂದು ದಿನವಾದ ಮೇಲೆ ತೆಂಕಣಗಾಳಿ ಹುಟ್ಟಿದ್ದರಿಂದ ಎರಡನೆಯ ದಿನದಲ್ಲಿ ಪೊತಿಯೋಲಕ್ಕೆ ಬಂದೆವು.


ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ ನಮ್ಮನ್ನು ಎದುರುಗೊಳ್ಳುವದಕ್ಕಾಗಿ ಕೆಲವರು ಅಪ್ಪಿಯಪೇಟೆಯವರೆಗೂ ಕೆಲವರು ತ್ರಿಛತ್ರವೆಂಬ ಸ್ಥಳದವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತೋತ್ರವನ್ನು ಮಾಡಿ ಧೈರ್ಯಗೊಂಡನು.


ಅವರು ಅವನಿಗೆ - ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ಕಾಗದಗಳು ಬರಲಿಲ್ಲ. ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತಾಡಲೂ ಇಲ್ಲ.


ಸಹೋದರರೇ, ನನ್ನ ಕೆಲಸವು ಇತರ ಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂದು ನನ್ನ ಅಪೇಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು