Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:16 - ಕನ್ನಡ ಸತ್ಯವೇದವು J.V. (BSI)

16 ನಾವು ರೋಮಾಪುರಕ್ಕೆ ಬಂದ ಮೇಲೆ ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ನಾವು ರೋಮಿಗೆ ಹೋದೆವು. ಅಲ್ಲಿ ಪ್ರತ್ಯೇಕವಾಗಿರಲು ಪೌಲನಿಗೆ ಅವಕಾಶವನ್ನು ಕೊಡಲಾಯಿತು. ಆದರೆ ಪೌಲನನ್ನು ಕಾಯುವುದಕ್ಕಾಗಿ ಸೈನಿಕನೊಬ್ಬನು ಅವನೊಂದಿಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಾನಾ ಅಮಿ ರೊಮ್ ಶಾರಾಕ್ ಪಾಲ್ಲ್ಯಾಂವ್ ಥೈ ಪಾವ್ಲುಕ್ ಅಮ್ಚ್ಯಾಕ್ನಾ ಯೆಗ್ಳುನ್ ರ್‍ಹಾವ್ಕ್ ಅವಕಾಸ್ ದಿವ್ನ್ ಹೊಲ್ಲೆ ಖರೆ ಎಕ್ ಸೈನಿಕ್ ತೆಕಾ ರಾಕ್ವಲಿ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:16
18 ತಿಳಿವುಗಳ ಹೋಲಿಕೆ  

ಮರುದಿನ ಸೀದೋನಿಗೆ ಮುಟ್ಟಿದೆವು. ಯೂಲ್ಯನು ಪೌಲನಿಗೆ ದಯೆಯನ್ನು ತೋರಿಸುವವನಾಗಿ ಅವನನ್ನು ಸ್ನೇಹಿತರ ಬಳಿಗೆ ಹೋಗಿ ಸತ್ಕಾರ ಹೊಂದುವದಕ್ಕೆ ಬಿಟ್ಟನು.


ಆಗ ಅವನು ಶತಾಧಿಪತಿಗೆ - ಪೌಲನು ಕಾವಲಲ್ಲಿರಬೇಕು, ಆದರೆ ಅವನು ಬಿಡುವಾಗಿರಲಿ, ಅವನನ್ನು ಉಪಚರಿಸುವದಕ್ಕೆ ಅವನ ಸ್ವಂತ ಜನರಲ್ಲಿ ಯಾರಿಗೂ ಅಡ್ಡಿಮಾಡಬಾರದೆಂದು ಅಪ್ಪಣೆಮಾಡಿದನು.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರ ಹೊಂದಿರುವ ಮಹಾನಗರಿಯೇ.


ಇದು ಬುದ್ಧಿವಂತನಿಗೆ ಮಾತ್ರ ಗೊತ್ತಾಗುವದು. ಆ ಏಳು ತಲೆಗಳು ಆ ಸ್ತ್ರೀ ಕೂತುಕೊಂಡಿರುವ ಏಳು ಬೆಟ್ಟಗಳೇ;


ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು - ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲಾಗಿ ತೀರಕ್ಕೆ ಹೋಗಬೇಕೆಂತಲೂ


ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ - ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವದಕ್ಕಾಗುವದಿಲ್ಲವೆಂದು ಹೇಳಿದನು.


ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇವಿುಗೆ ಹೋಗಬೇಕೆಂದು ಮನಸ್ಸಿನಲ್ಲಿ ಉದ್ದೇಶಿಸಿ ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು ಹೇಳಿದನು.


ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ಪಂಫುಲ್ಯ, ಐಗುಪ್ತ, ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ ರೋಮಾಪುರದಿಂದ ಬಂದು ಇಳಿದಿರುವ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳೂ ಕ್ರೇತ್ಯರೂ


ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ - ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು;


ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳಿಕೆಯ ಹತ್ತೊಂಭತ್ತನೆಯ ವರುಷದಲ್ಲಿ ಬಾಬೆಲಿನ ಅರಸನ ಸೇವಕನೂ ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನೆಂಬವನು ಯೆರೂಸಲೇವಿುಗೆ ಬಂದು


ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ.


ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು; ಆಮೇಲೆ ಯೆರೆಮೀಯನು [ಹಿಂದಿನಂತೆ] ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು