Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:4 - ಕನ್ನಡ ಸತ್ಯವೇದವು J.V. (BSI)

4 ಆ ಜಂತು ಅವನ ಕೈಯಿಂದ ಜೋತಾಡುವದನ್ನು ದ್ವೀಪದವರು ನೋಡಿ - ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಇವನನ್ನು ಬದುಕಗೊಡಿಸುವದಿಲ್ಲವೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಪಾವ್ಲುಚ್ಯಾ ಹಾತಿಕ್ ಸುತ್ ಧರಲ್ಯಾ ಸಾಪಾಕ್ ಬಗಲಿ ದ್ವಿಪಾತ್ಲಿ ಲೊಕಾ, ಹ್ಯೊ ಖುನ್ಕಾರಿಚ್ ಹೊವ್ಕ್ ಫಿರೆ! ಸಮುಂದರಾತ್ನಾ ಚುಕುನ್ ಯೆಲ್ಯಾರ್ ಬಿ ತೆಚ್ಯಾ ನಸಿಬಾಕ್ ತೆಕಾ ಜಿವಾನಿ ಥವ್ತಲೆ ಮನ್‍ ನಾ ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:4
20 ತಿಳಿವುಗಳ ಹೋಲಿಕೆ  

ಇಲ್ಲವೆ ಸಿಲೊವಾವಿುನಲ್ಲಿ ಬುರುಜುಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಅಪರಾಧಿಗಳೆಂದು ಭಾವಿಸುತ್ತೀರೋ?


ಅದಕ್ಕೆ ಆತನು ಅವರಿಗೆ - ಆ ಗಲಿಲಾಯದವರು ಅಂಥ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?


ಆದರೆ ಪೌಲನು ಆ ಜಂತುವನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಅವನಿಗೆ ಏನೂ ಕೇಡಾಗಲಿಲ್ಲ.


ಅನ್ಯಭಾಷೆಯವರಾದ ಆ ದ್ವೀಪದವರು ನಮಗೆ ಮಾಡಿದ ಉಪಕಾರವು ಅಷ್ಟಿಷ್ಟಲ್ಲ. ಮಳೆಯು ಆಗಲೇ ಹೊಯ್ಯುತ್ತಿದ್ದರಿಂದಲೂ ಚಳಿಯಾಗಿರುವದರಿಂದಲೂ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.


ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.


ನನ್ನ ಸ್ತೋತ್ರವನ್ನು ಪ್ರಚಾರಪಡಿಸಲಿ ಎಂದು ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.


ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.


ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂವಿುಯು ತನ್ನಲ್ಲಿ ಇಂಗಿದ್ದ ರಕ್ತವನ್ನು ವ್ಯಕ್ತಗೊಳಿಸುವದು, ತನ್ನ ನಿವಾಸಿಗಳಲ್ಲಿ ಹತರಾಗಿದ್ದವರನ್ನು ಇನ್ನು ಮರೆಮಾಜದು.


ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು.


ಯೆಹೋವದೇವರು ಉಂಟುಮಾಡಿದ ಎಲ್ಲಾ ಭೂಜಂತುಗಳಲ್ಲಿ ಸರ್ಪವು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಯ ಬಳಿಗೆ ಬಂದು - ಏನವ್ವಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಬಾರದೆಂದು ದೇವರು ಅಪ್ಪಣೆಕೊಟ್ಟಿರುವದು ನಿಜವೋ ಎಂದು ಕೇಳಲು ಸ್ತ್ರೀಯು -


ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಲು ಆ ಕಾವಿನ ದೆಸೆಯಿಂದ ಒಂದು ಹಾವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಹಿಡುಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು