Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:12 - ಕನ್ನಡ ಸತ್ಯವೇದವು J.V. (BSI)

12 ಪೇತ್ರನು ಇದನ್ನು ನೋಡಿ ಜನರಿಗೆ - ಇಸ್ರಾಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯಪಡುತ್ತೀರಿ? ನೀವು ನಮ್ಮ ಮೇಲೆ ದೃಷ್ಟಿಯಿಟ್ಟು ನೋಡುವದೇನು? ನಾವು ಸ್ವಂತ ಶಕ್ತಿಯಿಂದಾಗಲಿ ದೇವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಪೇತ್ರನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ಇದನ್ನು ಕಂಡು ನೀವು ಯಾಕೆ ಆಶ್ಚರ್ಯಗೊಂಡಿರುವಿರಿ? ಈ ಮನುಷ್ಯನನ್ನು ನಡೆಯುವಂತೆ ಮಾಡಿದ್ದು ನಮ್ಮ ಶಕ್ತಿಯೆಂದು ನೀವು ನಮ್ಮನ್ನು ನೋಡುತ್ತಿರುವಿರಾ? ನಾವು ಒಳ್ಳೆಯವರಾಗಿರುವುದರಿಂದ ಈ ಕಾರ್ಯವಾಯಿತೆಂದು ಭಾವಿಸಿಕೊಂಡಿದ್ದೀರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾನಾ ಪೆದ್ರುನ್ ತ್ಯಾ ಲೊಕಾಕ್ನಿ ಬಗುನ್ ಮಾಜ್ಯಾ ಇಸ್ರಾಯೆಲಾಂಚ್ಯಾ ಲೊಕಾನು ಹೆ ಬಗುನ್ ತುಮಿ ಕಶ್ಯಾಕ್ ಅಜಾಪ್ ಹೊತ್ತ್ಯಾಶಿ? ಹೊ ಚಲುಲಾಗಲೆ ಮಾಜ್ಯಾ ತಾಕ್ತಿನ್ ಮಿಯಾ ಕರ್‍ಲಾ ಮನುನ್ ಬಗುಲ್ಯಾಸಿ ಕಾಯ್? ಅಮಿ ಬರೆ ಪಾನಾನ್ ಹೊತ್ಯಾಕ್ ಹಿ ಕಾಮಾ ಹೊವ್ಲಾತ್ ಮನುನ್ ಚಿಂತುಲ್ಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:12
15 ತಿಳಿವುಗಳ ಹೋಲಿಕೆ  

ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು;


ಯೋಸೇಫನು - ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನು ಕೊಡಬಲ್ಲನೆಂದು ಹೇಳಿದನು.


ಅವರು ಇಸ್ರಾಯೇಲನ ವಂಶದವರೂ ದೇವರು ಪುತ್ರರಾಗಿ ಸ್ವೀಕರಿಸಿದವರೂ ಆಗಿದ್ದಾರೆ. ಅವರಲ್ಲಿ ದೇವರ ತೇಜಸ್ಸಾನ್ನಿಧ್ಯವು ಇದೆ; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡನು; ಅವರಿಗೆ ಧರ್ಮಶಾಸ್ತ್ರವೂ ದೇವಾಲಯದಲ್ಲಿ ನಡೆಯುವ ಆರಾಧನೆಯೂ ವಾಗ್ದಾನಗಳೂ ಕೊಡೋಣವಾದವು.


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.


ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮಲ್ಲಿರುವ ಯೆಹೂದ್ಯ ಮತಾವಲಂಭಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿ ಅದೆ.


ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.


ಅವರು ಅವನಿಗೆ - ನಮಗೆ ಸ್ವಪ್ನಬಿತ್ತು; ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ ಎಂದು ಹೇಳಲು ಯೋಸೇಫನು ಅವರಿಗೆ - ಸ್ವಪ್ನಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ; ದಯಮಾಡಿ ನಿಮ್ಮ ಸ್ವಪ್ನವನ್ನು ನನಗೆ ತಿಳಿಸಿರಿ ಎಂದು ಹೇಳಿದನು.


ಅವನು ಪೇತ್ರ ಯೋಹಾನರನ್ನು ಹಿಡುಕೊಂಡೇ ಇರುವಾಗ ಆಶ್ಚರ್ಯಪಡುತ್ತಿರುವ ಆ ಜನರೆಲ್ಲರು ಅವರ ಬಳಿಗೆ ಸೊಲೊಮೋನನದೆಂಬ ಹೆಸರುಳ್ಳ ಮಂಟಪಕ್ಕೆ ಗುಂಪು ಗುಂಪಾಗಿ ಓಡಿಬಂದರು.


ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ.


ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು - ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು ಎಂದು ನನ್ನನ್ನು ಕೇಳಲು - ಅಯ್ಯಾ, ನೀನೇ ಬಲ್ಲೆ ಅಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು