Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:17 - ಕನ್ನಡ ಸತ್ಯವೇದವು J.V. (BSI)

17 ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ತಿಳಿಯದೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ಮಾಜ್ಯಾ ಭಾವಾನೊ ಅನಿ ಭೆನಿಯಾನೊ, ತುಮ್ಕಾ ಕಳಿಸ್ತಾನಾ ಅಶೆ ಕರ್ಲ್ಯಾಸಿ ಮನ್ತಲೆ ಮಾಕಾ ಗೊತ್ತ್ ಹಾಯ್, ತುಮ್ಚ್ಯಾ ಮೊಟ್ಯಾ ಮಾನ್ಸಾನಿಬಿ ಜೆಜುಕ್ ತಿರಸ್ಕಾರ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:17
23 ತಿಳಿವುಗಳ ಹೋಲಿಕೆ  

ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಯೆರೂಸಲೇವಿುನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಆತನನ್ನಾಗಲಿ ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲಿ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.


ಇದನ್ನು ಇಹಲೋಕಾಧಿಕಾರಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆಯುಳ್ಳ ಕರ್ತನನ್ನು ಶಿಲುಬೆಗೆ ಹಾಕಿಸುತ್ತಿರಲಿಲ್ಲ;


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವದರಿಂದ ಇಂಥದನ್ನು ನಿಮಗೆ ಮಾಡುವರು.


ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.


ದೇವರು ತಾನು ಮುಂದಾಗಿ ತನ್ನ ಜನರಾಗುವದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಯನ್ನು ತಳ್ಳಿ ಬಿಡಲಿಲ್ಲ. ಎಲೀಯನ ಚರಿತ್ರೆಯಲ್ಲಿ ಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡಿಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.


ಅವರು ಆರೋನನಿಗೆ - ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.


ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.


ಆದದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು; ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತು. ನಿನ್ನ ಆಶೀರ್ವಾದದಿಂದ ಶುಭವೂ ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬದನ್ನು ನಾನು ಬಲ್ಲೆ ಎಂದು ಹೇಳಿಸಿದನು.


ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲ್ಯರು ನೋಡಿ ಆರೋನನ ಬಳಿಗೆ ಕೂಡಿಬಂದು - ಏಳು; ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ನಮಗೆ ದೇವರುಗಳನ್ನು ಮಾಡಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ ಎಂದು ಹೇಳಿದರು.


ಅವರು ಅವನೆದುರಿಗೆ ಅಡ್ಡಬೀಳಲು ಯೋಸೇಫನು ಅವರನ್ನು - ನೀವು ಮಾಡಿರುವ ಈ ಕೃತ್ಯವು ಏನು! ನನ್ನಂಥವನು ಶಕುನ ನೋಡಿ ಗುಟ್ಟನ್ನು ಬಿಚ್ಚುವನೆಂಬದು


ಆದರೆ ಅವನು ಒಪ್ಪದೆ - ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿ ನಾನು ಇರುವದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೆ ಇದ್ದಾನೆ;


ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ ಅಂದನು.


ಶರೀರದಲ್ಲಿಯೇ ಬದುಕಬೇಕಾದಲ್ಲಿ ಕೆಲಸಮಾಡಿ ಫಲ ಹೊಂದಲು ನನಗೆ ಅನುಕೂಲವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು.


ತರುವಾಯ ಪಿಲಾತನು ಮಹಾಯಾಜಕರನ್ನೂ ಅಧಿಕಾರಿಗಳನ್ನೂ ಪ್ರಜೆಗಳನ್ನೂ ಒಟ್ಟಾಗಿ ಕರಸಿ


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿವಿುತ್ತ ನಿಮಗೆ ಮಾಡುವರು.


ಈ ವಿಷಯದಲ್ಲಿ ಮಹಾಯಾಜಕನೂ ಹಿರೀಸಭೆಯವರೆಲ್ಲರೂ ಸಾಕ್ಷಿಗಳಾಗಿದ್ದಾರೆ. ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಕಾಗದಗಳನ್ನು ತೆಗೆದುಕೊಂಡು ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ದಂಡನೆಗಾಗಿ ಯೆರೂಸಲೇವಿುಗೆ ತರಬೇಕೆಂದು ಹೊರಟೆನು.


ಅವರು ಅವನಿಗೆ - ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ಕಾಗದಗಳು ಬರಲಿಲ್ಲ. ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತಾಡಲೂ ಇಲ್ಲ.


ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು